ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ ಮಗು ಹುಟ್ಟಿದ ಮಾರನೇ ದಿನವೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದ ನಾಗೇಶ್(47) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯೂ ರಾತ್ರಿ ಸುಮಾರು 10.30 ಗಂಟೆಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಅವರನ್ನು ಸುಮಾರು 7 ಗಂಟೆಗೆ ನೋಡಿದಾಗ ಅವರು ಮೃತಪಟ್ಟಿದ್ದರು. ಆದರೆ ಮೃತನ ಸಂಬಂಧಿಗಳು 12 ಗಂಟೆಯಾದರೂ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ತೆರವುಗೊಳಿಸಿಲ್ಲ. ಬಳಿಕ ಈ ಮೃತ ದೇಹಕ್ಕೆ ಆಸ್ಪತ್ರೆ ಸಿಬ್ಬಂದಿಗಳು, ಬೆಡ್ ಶೀಟ್ ಹೊದಿಸಿ ಬ್ಯಾರಿಕೇಡ್ ಎಳೆದಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…