ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲ ಪತ್ತೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಡುತ್ತಿದ್ದೇವೆ. ಡ್ರಗ್ಸ್ನ ಲಿಂಕ್ ಯಾವುದೇ ಆಗಿರಲಿ, ನಾವು ಅದನ್ನು ತಡೆಯುತ್ತೇವೆ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಸಿಗ್ನಲ್ ಲೈಟ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್ ಲೈಟ್ ಅಳವಡಿಕೆ ಮಾಡಿದ್ದಾರೆ. ಜನರಿಗೆ ಅನಗತ್ಯ ತೊಂದರೆ ಕೊಡಲು ಯಾರು ಸಿಗ್ನಲ್ ಲೈಟ್ ಹಾಕುವುದಿಲ್ಲ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಈ ವ್ಯವಸ್ಥೆ ಮಾಡಲಾಗಿದೆ. ಏನಾದ್ರು ಬದಲಾವಣೆ ಬೇಕಿದ್ರೆ ಸ್ಥಳೀಯವಾಗಿ ಮಾಡಿಕೊಳ್ಳುತ್ತಾರೆ. ಹೆಜ್ಜೆ ಹೆಜ್ಜೆಗಂತು ಸಿಗ್ನಲ್ ಲೈಟ್ ಹಾಕಿಲ್ಲ ಎಂದರು.





