ಮೈಸೂರು ನಗರ

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು.

ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ನೇತೃತ್ವದಲ್ಲಿ ನಡೆದ ಚಿತ್ರ ಸಂತೆಯಲ್ಲಿ ಐವತ್ತಕ್ಕೂ ಹೆಚ್ಚು ಕಲಾವಿದರು ವಿವಿಧ ಚಿತ್ರಗಳನ್ನು ಬಿಡಿಸಿ, ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದರು.
ವಾಟರ್ ಪೇಂಟಿಂಗ್ಸ್, ಪೆನ್ಸಿಲ್‌ನಿಂದ ಬಿಡಿಸಿದ ಚಿತ್ರ, ಮ್ಯಾಟ್ ಮೇಲೆ ಬಿಡಿಸಿದ ಚಿತ್ತಾರ, ಬಳಪದ ಕಲ್ಲು ಬಳಸಿ ಕೆತ್ತಿರುವ ವಿಗ್ರಹಗಳು, ತಾಮ್ರದಿಂದ ಕೆತ್ತಿರುವ ವಿಗ್ರಹಗಳು ನೋಡುಗರನ್ನು ಮುದಗೊಳಿಸಿದವು.ಇದೇ ವೇಳೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಕಲಾವಿದರು ಜನರ ಗಮನಸೆಳೆದರು.

ಇದರ ಜೊತೆಗೆ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಹಂದಿ ಹಚ್ಚುವ ಸ್ಪರ್ಧೆ, ತಿಂಡಿ, ತಿನಿಸುಗಳನ್ನು ತಯಾರಿಸುವ ಹಾಗೂ ಪಾನೀಯಗಳನ್ನು ತಯಾರಿಸುವ ಸ್ಪರ್ಧೆ ಆಕರ್ಷಣೀಯವಾಗಿತ್ತು.
ಮಕ್ಕಳಿಂದ ಹಿಡಿದು ೭೦ ವರ್ಷ ವಯಸ್ಸಿನ ಮಹಿಳೆಯರು ಕೂಡ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರಿಗೆ ಅಚ್ಚರಿ ಮೂಡಿಸಿದರು. ಅವರು ತಯಾರಿಸಿದ ಪಂಚಾಮೃತ, ಕೋಸಂಬುರಿ, ಸಿಹಿ ಹಾಗೂ ಖಾರದ ಅವಲಕ್ಕಿ ಸೇರಿದಂತೆ ಇನ್ನಿತರ ತಿನಿಸುಗಳ ರುಚಿಯನ್ನು ಗಣ್ಯರು ಸವಿದರು.

ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಚಿತ್ರಸಂತೆಯನ್ನು ಉದ್ಘಾಟಿಸಿದರು. ಅವರೊಂದಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಅಯೂಬ್‌ಖಾನ್ ಅವರು ಪ್ರಾಧಿಕಾರದ ಅಧ್ಯಕ್ಷರಾದ ನಂತರ ಹಲವು ಹೊಸತನಗಳನ್ನು ಜನರಿಗೆ ಪರಿಚಯಿಸಿದ್ದಾರೆ. ಇಲ್ಲಿ ಎಲ್ಲಾ ಕಲಾವಿದರನ್ನೂ ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರದರ್ಶಿಸಿ, ಜನರಿಗೆ ಮುಟ್ಟಿಸಿರುವುದು ಶ್ಲಾಘನೀಯ ಎಂದರು. ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷ ಉಮೇಶ್, ಕಾರ್ಯಾಧ್ಯಕ್ಷೆ ಲತಾ ರಂಗನಾಥ್, ಮಹಿಳಾ ಉದ್ದಿಮೆ ಉಪ ಸಮಿತಿ ಅಧ್ಯಕ್ಷೆ ಎಂ.ಛಾಯಮ್ಮ, ಉಪಾಧ್ಯಕ್ಷರಾದ ಫೈರೋಜ್‌ಖಾನ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

7 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

8 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

10 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

11 hours ago