ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು.
ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್ ಅವರ ನೇತೃತ್ವದಲ್ಲಿ ನಡೆದ ಚಿತ್ರ ಸಂತೆಯಲ್ಲಿ ಐವತ್ತಕ್ಕೂ ಹೆಚ್ಚು ಕಲಾವಿದರು ವಿವಿಧ ಚಿತ್ರಗಳನ್ನು ಬಿಡಿಸಿ, ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದರು.
ವಾಟರ್ ಪೇಂಟಿಂಗ್ಸ್, ಪೆನ್ಸಿಲ್ನಿಂದ ಬಿಡಿಸಿದ ಚಿತ್ರ, ಮ್ಯಾಟ್ ಮೇಲೆ ಬಿಡಿಸಿದ ಚಿತ್ತಾರ, ಬಳಪದ ಕಲ್ಲು ಬಳಸಿ ಕೆತ್ತಿರುವ ವಿಗ್ರಹಗಳು, ತಾಮ್ರದಿಂದ ಕೆತ್ತಿರುವ ವಿಗ್ರಹಗಳು ನೋಡುಗರನ್ನು ಮುದಗೊಳಿಸಿದವು.ಇದೇ ವೇಳೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಕಲಾವಿದರು ಜನರ ಗಮನಸೆಳೆದರು.
ಇದರ ಜೊತೆಗೆ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಹಂದಿ ಹಚ್ಚುವ ಸ್ಪರ್ಧೆ, ತಿಂಡಿ, ತಿನಿಸುಗಳನ್ನು ತಯಾರಿಸುವ ಹಾಗೂ ಪಾನೀಯಗಳನ್ನು ತಯಾರಿಸುವ ಸ್ಪರ್ಧೆ ಆಕರ್ಷಣೀಯವಾಗಿತ್ತು.
ಮಕ್ಕಳಿಂದ ಹಿಡಿದು ೭೦ ವರ್ಷ ವಯಸ್ಸಿನ ಮಹಿಳೆಯರು ಕೂಡ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರಿಗೆ ಅಚ್ಚರಿ ಮೂಡಿಸಿದರು. ಅವರು ತಯಾರಿಸಿದ ಪಂಚಾಮೃತ, ಕೋಸಂಬುರಿ, ಸಿಹಿ ಹಾಗೂ ಖಾರದ ಅವಲಕ್ಕಿ ಸೇರಿದಂತೆ ಇನ್ನಿತರ ತಿನಿಸುಗಳ ರುಚಿಯನ್ನು ಗಣ್ಯರು ಸವಿದರು.
ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಚಿತ್ರಸಂತೆಯನ್ನು ಉದ್ಘಾಟಿಸಿದರು. ಅವರೊಂದಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಅಯೂಬ್ಖಾನ್ ಅವರು ಪ್ರಾಧಿಕಾರದ ಅಧ್ಯಕ್ಷರಾದ ನಂತರ ಹಲವು ಹೊಸತನಗಳನ್ನು ಜನರಿಗೆ ಪರಿಚಯಿಸಿದ್ದಾರೆ. ಇಲ್ಲಿ ಎಲ್ಲಾ ಕಲಾವಿದರನ್ನೂ ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರದರ್ಶಿಸಿ, ಜನರಿಗೆ ಮುಟ್ಟಿಸಿರುವುದು ಶ್ಲಾಘನೀಯ ಎಂದರು. ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷ ಉಮೇಶ್, ಕಾರ್ಯಾಧ್ಯಕ್ಷೆ ಲತಾ ರಂಗನಾಥ್, ಮಹಿಳಾ ಉದ್ದಿಮೆ ಉಪ ಸಮಿತಿ ಅಧ್ಯಕ್ಷೆ ಎಂ.ಛಾಯಮ್ಮ, ಉಪಾಧ್ಯಕ್ಷರಾದ ಫೈರೋಜ್ಖಾನ್ ಮುಂತಾದವರು ಹಾಜರಿದ್ದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…