ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು.
ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್ ಅವರ ನೇತೃತ್ವದಲ್ಲಿ ನಡೆದ ಚಿತ್ರ ಸಂತೆಯಲ್ಲಿ ಐವತ್ತಕ್ಕೂ ಹೆಚ್ಚು ಕಲಾವಿದರು ವಿವಿಧ ಚಿತ್ರಗಳನ್ನು ಬಿಡಿಸಿ, ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದರು.
ವಾಟರ್ ಪೇಂಟಿಂಗ್ಸ್, ಪೆನ್ಸಿಲ್ನಿಂದ ಬಿಡಿಸಿದ ಚಿತ್ರ, ಮ್ಯಾಟ್ ಮೇಲೆ ಬಿಡಿಸಿದ ಚಿತ್ತಾರ, ಬಳಪದ ಕಲ್ಲು ಬಳಸಿ ಕೆತ್ತಿರುವ ವಿಗ್ರಹಗಳು, ತಾಮ್ರದಿಂದ ಕೆತ್ತಿರುವ ವಿಗ್ರಹಗಳು ನೋಡುಗರನ್ನು ಮುದಗೊಳಿಸಿದವು.ಇದೇ ವೇಳೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಕಲಾವಿದರು ಜನರ ಗಮನಸೆಳೆದರು.
ಇದರ ಜೊತೆಗೆ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಹಂದಿ ಹಚ್ಚುವ ಸ್ಪರ್ಧೆ, ತಿಂಡಿ, ತಿನಿಸುಗಳನ್ನು ತಯಾರಿಸುವ ಹಾಗೂ ಪಾನೀಯಗಳನ್ನು ತಯಾರಿಸುವ ಸ್ಪರ್ಧೆ ಆಕರ್ಷಣೀಯವಾಗಿತ್ತು.
ಮಕ್ಕಳಿಂದ ಹಿಡಿದು ೭೦ ವರ್ಷ ವಯಸ್ಸಿನ ಮಹಿಳೆಯರು ಕೂಡ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರಿಗೆ ಅಚ್ಚರಿ ಮೂಡಿಸಿದರು. ಅವರು ತಯಾರಿಸಿದ ಪಂಚಾಮೃತ, ಕೋಸಂಬುರಿ, ಸಿಹಿ ಹಾಗೂ ಖಾರದ ಅವಲಕ್ಕಿ ಸೇರಿದಂತೆ ಇನ್ನಿತರ ತಿನಿಸುಗಳ ರುಚಿಯನ್ನು ಗಣ್ಯರು ಸವಿದರು.
ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಚಿತ್ರಸಂತೆಯನ್ನು ಉದ್ಘಾಟಿಸಿದರು. ಅವರೊಂದಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಅಯೂಬ್ಖಾನ್ ಅವರು ಪ್ರಾಧಿಕಾರದ ಅಧ್ಯಕ್ಷರಾದ ನಂತರ ಹಲವು ಹೊಸತನಗಳನ್ನು ಜನರಿಗೆ ಪರಿಚಯಿಸಿದ್ದಾರೆ. ಇಲ್ಲಿ ಎಲ್ಲಾ ಕಲಾವಿದರನ್ನೂ ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರದರ್ಶಿಸಿ, ಜನರಿಗೆ ಮುಟ್ಟಿಸಿರುವುದು ಶ್ಲಾಘನೀಯ ಎಂದರು. ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷ ಉಮೇಶ್, ಕಾರ್ಯಾಧ್ಯಕ್ಷೆ ಲತಾ ರಂಗನಾಥ್, ಮಹಿಳಾ ಉದ್ದಿಮೆ ಉಪ ಸಮಿತಿ ಅಧ್ಯಕ್ಷೆ ಎಂ.ಛಾಯಮ್ಮ, ಉಪಾಧ್ಯಕ್ಷರಾದ ಫೈರೋಜ್ಖಾನ್ ಮುಂತಾದವರು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…