ಮೈಸೂರು ನಗರ

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು.

ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ನೇತೃತ್ವದಲ್ಲಿ ನಡೆದ ಚಿತ್ರ ಸಂತೆಯಲ್ಲಿ ಐವತ್ತಕ್ಕೂ ಹೆಚ್ಚು ಕಲಾವಿದರು ವಿವಿಧ ಚಿತ್ರಗಳನ್ನು ಬಿಡಿಸಿ, ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದರು.
ವಾಟರ್ ಪೇಂಟಿಂಗ್ಸ್, ಪೆನ್ಸಿಲ್‌ನಿಂದ ಬಿಡಿಸಿದ ಚಿತ್ರ, ಮ್ಯಾಟ್ ಮೇಲೆ ಬಿಡಿಸಿದ ಚಿತ್ತಾರ, ಬಳಪದ ಕಲ್ಲು ಬಳಸಿ ಕೆತ್ತಿರುವ ವಿಗ್ರಹಗಳು, ತಾಮ್ರದಿಂದ ಕೆತ್ತಿರುವ ವಿಗ್ರಹಗಳು ನೋಡುಗರನ್ನು ಮುದಗೊಳಿಸಿದವು.ಇದೇ ವೇಳೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಕಲಾವಿದರು ಜನರ ಗಮನಸೆಳೆದರು.

ಇದರ ಜೊತೆಗೆ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಹಂದಿ ಹಚ್ಚುವ ಸ್ಪರ್ಧೆ, ತಿಂಡಿ, ತಿನಿಸುಗಳನ್ನು ತಯಾರಿಸುವ ಹಾಗೂ ಪಾನೀಯಗಳನ್ನು ತಯಾರಿಸುವ ಸ್ಪರ್ಧೆ ಆಕರ್ಷಣೀಯವಾಗಿತ್ತು.
ಮಕ್ಕಳಿಂದ ಹಿಡಿದು ೭೦ ವರ್ಷ ವಯಸ್ಸಿನ ಮಹಿಳೆಯರು ಕೂಡ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರಿಗೆ ಅಚ್ಚರಿ ಮೂಡಿಸಿದರು. ಅವರು ತಯಾರಿಸಿದ ಪಂಚಾಮೃತ, ಕೋಸಂಬುರಿ, ಸಿಹಿ ಹಾಗೂ ಖಾರದ ಅವಲಕ್ಕಿ ಸೇರಿದಂತೆ ಇನ್ನಿತರ ತಿನಿಸುಗಳ ರುಚಿಯನ್ನು ಗಣ್ಯರು ಸವಿದರು.

ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಚಿತ್ರಸಂತೆಯನ್ನು ಉದ್ಘಾಟಿಸಿದರು. ಅವರೊಂದಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಅಯೂಬ್‌ಖಾನ್ ಅವರು ಪ್ರಾಧಿಕಾರದ ಅಧ್ಯಕ್ಷರಾದ ನಂತರ ಹಲವು ಹೊಸತನಗಳನ್ನು ಜನರಿಗೆ ಪರಿಚಯಿಸಿದ್ದಾರೆ. ಇಲ್ಲಿ ಎಲ್ಲಾ ಕಲಾವಿದರನ್ನೂ ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರದರ್ಶಿಸಿ, ಜನರಿಗೆ ಮುಟ್ಟಿಸಿರುವುದು ಶ್ಲಾಘನೀಯ ಎಂದರು. ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷ ಉಮೇಶ್, ಕಾರ್ಯಾಧ್ಯಕ್ಷೆ ಲತಾ ರಂಗನಾಥ್, ಮಹಿಳಾ ಉದ್ದಿಮೆ ಉಪ ಸಮಿತಿ ಅಧ್ಯಕ್ಷೆ ಎಂ.ಛಾಯಮ್ಮ, ಉಪಾಧ್ಯಕ್ಷರಾದ ಫೈರೋಜ್‌ಖಾನ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago