ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರ ಮೂಲಕ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ನಾವು ಕೋರ್ಟ್ ನಲ್ಲಿ ಪರ್ಮಿಷನ್ ಕೇಳಿದ್ದೇವೆ. ಕೋರ್ಟ್ ಪರ್ಮಿಷನ್ ಸಿಕ್ಕಿದ ಬಳಿಕ ಪ್ರತಿಭಟನೆ ಮಾಡುತ್ತೇವೆ. ಮುಸ್ಲಿಂಮರ ಓಲೈಕೆಗೆ ಸರ್ಕಾರ ಈ ರೀತಿ ಮಾಡುತ್ತಿದೆ. ಅವರ ಓಲೈಕೆ ಬಿಟ್ಟು ಬೇರೇನೂ ಇಲ್ಲ ಎಂದು ಕಿಡಿಕಾರಿದರು.
ಇನ್ನು ಉದಯಗಿರಿಯಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್ ಹಾಕಿದ್ದ ಸತೀಶ್ ಎಂಬಾತನನ್ನು ಪೊಲೀಸರು ಗಡಿಪಾರು ಮಾಡಿದ್ದು, ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕರು ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಇದಕ್ಕೆ ಪೊಲೀಸರು ತಡೆವೊಡ್ಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…