ಮೈಸೂರು ನಗರ

ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಹಿಂದೂ ದೇವರು. ಯದುವಂಶದ ಮನೆದೇವರು ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನ ಹಿಂದೂ ಧಾರ್ಮಿಕ ವಿಧಿ ವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನೂ ಬೇಕಾದರು ಹೇಳಲಿ ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ.
ನಮ್ಮ ಮನೆತನ ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆಯಾದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗುವುದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

6 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

41 mins ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

2 hours ago