ಮೈಸೂರು ನಗರ

ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಹಿಂದೂ ದೇವರು. ಯದುವಂಶದ ಮನೆದೇವರು ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನ ಹಿಂದೂ ಧಾರ್ಮಿಕ ವಿಧಿ ವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನೂ ಬೇಕಾದರು ಹೇಳಲಿ ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ.
ನಮ್ಮ ಮನೆತನ ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆಯಾದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗುವುದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

17 mins ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

1 hour ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

2 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

3 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

4 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

9 hours ago