ಮೈಸೂರು ನಗರ

ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಹಿಂದೂ ದೇವರು. ಯದುವಂಶದ ಮನೆದೇವರು ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನ ಹಿಂದೂ ಧಾರ್ಮಿಕ ವಿಧಿ ವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನೂ ಬೇಕಾದರು ಹೇಳಲಿ ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ.
ನಮ್ಮ ಮನೆತನ ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆಯಾದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗುವುದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago