ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪರೋಕ್ಷವಾಗಿ ಹೇಳಿದರು. ಸಿಎಂ ಅಧಿಕಾರ ಹಂಚಿಕೆಯ ಪ್ರಸ್ತಾಪವೇ ನಡೆದಿಲ್ಲ. ನಡೆದಿಲ್ಲ ಎಂದ ಮೇಲೆ ಅದರ ಜಾರಿಯ ಬಗ್ಗೆ ಪ್ರಶ್ನೆಗಳೇ ಇಲ್ಲ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದ್ಯಾ? ಇಲ್ಲ ತಾನೇ.?. ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ. ಹೈಕಮಾಂಡ್ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಎಂದು ಅನ್ನಿಸಿಲ್ಲ. ಹೈಕಮಾಂಡ್ ತನ್ನ ಅಗತ್ಯ ಇದ್ದಾಗ ಮಾತನಾಡುತ್ತದೆ. ಹೈಕಮಾಂಡ್ ಸುಮ್ಮನಿದೆ ಎಂದರೇ ಅದರಲ್ಲಿ ಬದಲಾವಣೆಗಳು ಇಲ್ಲ ಎಂದು ಅರ್ಥ. ಪಕ್ಷದಲ್ಲಿ ಒಬ್ಬೊಬ್ಬರು ತಮ್ಮ ತಮ್ಮ ಅಭಿಪ್ರಾಯ ಹೇಳಬಹುದು. ಸಿಎಂ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ರೆ ಸಿಎಲ್ಪಿ ಸಭೆಯಲ್ಲಿ ಶಾಸಕರು ಕೇಳುತ್ತಿದ್ದರು. ಯಾರು ಕೂಡ ಆ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲ ಇಲ್ಲ ಎಂದು ಅರ್ಥ ಎಂದು ಹೇಳಿದರು.
ಇನ್ನು ನಮ್ಮ ತಂದೆಯೇ ಐದು ವರ್ಷ ಸಿಎಂ ಎಂಬ ಎಂಎಲ್ಸಿ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ. ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ದಾರೆ ಗೊತ್ತಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಎಂದು ಹೇಳುತ್ತಿವೆ ಅಷ್ಟೇ. ಮೊನ್ನೆ ನಡೆದ ಸಭೆಯಲ್ಲೂ ಯಾರು ಏನು ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…