ಮೈಸೂರು ನಗರ

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪರೋಕ್ಷವಾಗಿ ಹೇಳಿದರು. ಸಿಎಂ ಅಧಿಕಾರ ಹಂಚಿಕೆಯ ಪ್ರಸ್ತಾಪವೇ ನಡೆದಿಲ್ಲ. ನಡೆದಿಲ್ಲ ಎಂದ ಮೇಲೆ ಅದರ ಜಾರಿಯ ಬಗ್ಗೆ ಪ್ರಶ್ನೆಗಳೇ ಇಲ್ಲ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದ್ಯಾ? ಇಲ್ಲ ತಾನೇ.?. ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ. ಹೈಕಮಾಂಡ್‌ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಎಂದು ಅನ್ನಿಸಿಲ್ಲ. ಹೈಕಮಾಂಡ್ ತನ್ನ ಅಗತ್ಯ ಇದ್ದಾಗ ಮಾತನಾಡುತ್ತದೆ. ಹೈಕಮಾಂಡ್ ಸುಮ್ಮನಿದೆ ಎಂದರೇ ಅದರಲ್ಲಿ ಬದಲಾವಣೆಗಳು ಇಲ್ಲ ಎಂದು ಅರ್ಥ. ಪಕ್ಷದಲ್ಲಿ ಒಬ್ಬೊಬ್ಬರು ತಮ್ಮ ತಮ್ಮ ಅಭಿಪ್ರಾಯ ಹೇಳಬಹುದು. ಸಿಎಂ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ರೆ ಸಿಎಲ್‌ಪಿ ಸಭೆಯಲ್ಲಿ ಶಾಸಕರು ಕೇಳುತ್ತಿದ್ದರು. ಯಾರು ಕೂಡ ಆ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲ ಇಲ್ಲ ಎಂದು ಅರ್ಥ ಎಂದು ಹೇಳಿದರು.

ಇನ್ನು ನಮ್ಮ ತಂದೆಯೇ ಐದು ವರ್ಷ ಸಿಎಂ ಎಂಬ ಎಂಎಲ್‌ಸಿ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ. ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ದಾರೆ ಗೊತ್ತಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಎಂದು ಹೇಳುತ್ತಿವೆ ಅಷ್ಟೇ. ಮೊನ್ನೆ ನಡೆದ ಸಭೆಯಲ್ಲೂ ಯಾರು ಏನು ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

9 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

21 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

25 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

31 mins ago