Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.

ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಅಗ್ನಿ ಬನ್ನಿರಾಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಅಗ್ನಿ ಬನ್ನಿ ದೇವರಾಯರು ಕ್ಷತ್ರಿಯರ ಆರಾಧ್ಯದೈವ ಮಾತ್ರವಲ್ಲದೆ, ಶ್ರಮಜೀವಿಗಳ ಸಂಕೇತವೂ ಹೌದು. ಜೀವನದಲ್ಲಿ ಯಶಸ್ವಿಯಾಗಲು ಶ್ರಮ ಅತಿ ಮುಖ್ಯ ಎಂದರು.

ಒಬ್ಬ ವ್ಯಕ್ತಿ ತನ್ನ ಪರಿಶ್ರಮದ ಮೂಲಕ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಪ್ರಗತಿ ಸಾಧಿಸಬಹುದು ಎಂಬುದಕ್ಕೆ ಅಗ್ನಿ ಬನ್ನಿ ದೇವರಾಯರ ಜೀವನವೇ ಸಾಕ್ಷಿ. ಅವರ ಆದರ್ಶಗಳನ್ನು, ನುಡಿಗಳನ್ನು ಹಾಗೂ ಅವರು ತೋರಿದ ಮಾರ್ಗವನ್ನು ನಾವು ಪಾಲಿಸದಿದ್ದರೆ ನಮ್ಮ ಜೀವನ ಅಸ್ತವ್ಯಸ್ತವಾಗುತ್ತದೆ ಎಂದು ತಿಳಿಸಿದರು.

ಮಹನೀಯರ ಆದರ್ಶ, ಅವರು ನಡೆದ ಬಂದ ಹಾದಿ, ವಚನಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಮತ್ತು ಪ್ರಸ್ತುತ ಪೀಳಿಗೆಗೆ ಅವುಗಳನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಇಂತಹ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಗ್ನಿಬನ್ನಿ ರಾಯ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳಾದ ಶಿವಣ್ಣ, ಶಾಂತೇಗೌಡ, ರಾಮೇಗೌಡ, ಹುಚ್ಚೇಗೌಡ, ವೆಂಕಟೇಶ್, ಲತಾ ರಂಗಸ್ವಾಮಿ, ವೀಣಾ ಸಿದ್ದೇಶ್, ಮಲ್ಲೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ. ಸುದರ್ಶನ್ ಉಪಸ್ಥಿತರಿದ್ದರು.

 

Tags:
error: Content is protected !!