ಮೈಸೂರು ನಗರ

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.

ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಅಗ್ನಿ ಬನ್ನಿರಾಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಅಗ್ನಿ ಬನ್ನಿ ದೇವರಾಯರು ಕ್ಷತ್ರಿಯರ ಆರಾಧ್ಯದೈವ ಮಾತ್ರವಲ್ಲದೆ, ಶ್ರಮಜೀವಿಗಳ ಸಂಕೇತವೂ ಹೌದು. ಜೀವನದಲ್ಲಿ ಯಶಸ್ವಿಯಾಗಲು ಶ್ರಮ ಅತಿ ಮುಖ್ಯ ಎಂದರು.

ಒಬ್ಬ ವ್ಯಕ್ತಿ ತನ್ನ ಪರಿಶ್ರಮದ ಮೂಲಕ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಪ್ರಗತಿ ಸಾಧಿಸಬಹುದು ಎಂಬುದಕ್ಕೆ ಅಗ್ನಿ ಬನ್ನಿ ದೇವರಾಯರ ಜೀವನವೇ ಸಾಕ್ಷಿ. ಅವರ ಆದರ್ಶಗಳನ್ನು, ನುಡಿಗಳನ್ನು ಹಾಗೂ ಅವರು ತೋರಿದ ಮಾರ್ಗವನ್ನು ನಾವು ಪಾಲಿಸದಿದ್ದರೆ ನಮ್ಮ ಜೀವನ ಅಸ್ತವ್ಯಸ್ತವಾಗುತ್ತದೆ ಎಂದು ತಿಳಿಸಿದರು.

ಮಹನೀಯರ ಆದರ್ಶ, ಅವರು ನಡೆದ ಬಂದ ಹಾದಿ, ವಚನಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಮತ್ತು ಪ್ರಸ್ತುತ ಪೀಳಿಗೆಗೆ ಅವುಗಳನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಇಂತಹ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಗ್ನಿಬನ್ನಿ ರಾಯ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳಾದ ಶಿವಣ್ಣ, ಶಾಂತೇಗೌಡ, ರಾಮೇಗೌಡ, ಹುಚ್ಚೇಗೌಡ, ವೆಂಕಟೇಶ್, ಲತಾ ರಂಗಸ್ವಾಮಿ, ವೀಣಾ ಸಿದ್ದೇಶ್, ಮಲ್ಲೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ. ಸುದರ್ಶನ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago