ಮೈಸೂರು ನಗರ

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು ನಗರದಲ್ಲಿ ಹಳೆಯ ಬಸ್‌ಗಳು ಹೊಸ ಸೂಸುತ್ತಿದ್ದ ಬಗ್ಗೆ ಆಂದೋಲನ ಸುದ್ದಿ ಮಾಡಿತ್ತು. ಈ ಬಗ್ಗೆ ಮಾತನಾಡಿರುವ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಅವರು, ಹೊಗೆ ಸೂಸುತ್ತಿರುವ ಬಸ್‌ಗಳನ್ನು ಪರಿಶೀಲಿಸುತ್ತೇವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಗಮನಿಸಿದ್ದೇನೆ. ಈ ನಿಮ್ಮ ಸಲಹೆ ಮೇರೆಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಇನ್ನು ಚಿತ್ರದುರ್ಗದಲ್ಲಿ ಸ್ಲೀಪರ್ ಬಸ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರಿನ ಆರ್‌ಟಿಓ ಅಧಿಕಾರಿಗಳು ಫುಲ್‌ ಅಲರ್ಟ್‌ ಆಗಿದ್ದಾರೆ. 60ಕ್ಕೂ ಹೆಚ್ಚು ಸ್ಲೀಪರ್ ಬಸ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 16 ಪ್ರಕರಣ ದಾಖಲಾಗಿದೆ. ಬಸ್‌ಗಳಲ್ಲಿ ಅಳವಡಿಸಿರುವ ಸುರಕ್ಷತಾ ಪರಿಕರಗಳನ್ನು ಕೂಡ ತಪಾಸಣೆ ನಡೆಸಲಾಗುತ್ತಿದೆ. ಸಾರಿಗೆ ಸಚಿವರ ಸೂಚನೆ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್‌ಗಳನ್ನು ತಪಾಸಣೆ ಮಾಡ್ತಿದ್ದೇವೆ. ಈ ಸಂಬಂಧ 16 ಪ್ರಕರಣಗಳನ್ನು ದಾಖಲು ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಅಪಘಾತ ಪ್ರಕರಣಗಳಲ್ಲಿ ಮೈಸೂರು ಇಡೀ ರಾಜ್ಯದಲ್ಲಿ 6 ನೇ ಸ್ಥಾನದಲ್ಲಿದೆ. ಅಪಘಾತ ಪ್ರಕರಣದಲ್ಲಿ ಕಳೆದ 5 ವರ್ಷದಲ್ಲಿ ಮೈಸೂರು ಟಾಪ್ 10ರ ಒಳಗಿದ್ದು, ಕಳೆದ ಸಾಲಿನಲ್ಲಿ 6ನೇ ಸ್ಥಾನದಲ್ಲಿದೆ. ಹೀಗಾಗಿ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ರಸ್ತೆ ಸುರಕ್ಷತಾ ಮಾಸಾಚರಣೆ ಹಮ್ಮಿಕೊಳ್ಳುತ್ತಿದ್ದೇವೆ. ಈ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ವಾಹನ ಸವಾರರಿಗೆ ಮನವರಿಕೆ ಮಾಡಿಕೊಡ್ತೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

33 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago