ಮೈಸೂರು ನಗರ

ದಸರಾ ಉದ್ಘಾಟಕರ ಆಯ್ಕೆ ವಿಚಾರ : ಶಾಸಕ ಜಿ.ಟಿ ದೇವೇಗೌಡ ಹೇಳಿದ್ದೇನು?

ಮೈಸೂರು : ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ದಸರಾವನ್ನು ಉದ್ಘಾಟನೆ ಮಾಡುತ್ತಾರೆ. ನಂಬಿಕೆ ಇಲ್ಲ ಅಂದರೆ ಅವರು ಬರುವುದೇ ಇಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಬಹಳ ಚುಟುಕಾಗಿ ತಿಳಿಸಿದರು.

ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಕೂಡ ಕೆ.ಎಸ್.ನಿಸಾರ್ ಅಹಮ್ಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಕೆಲವರು ಆ ಅಧ್ಯಯನ, ಈ ಅಧ್ಯಯನ ಎನ್ನುತ್ತಾ ಮಾತನಾಡುತ್ತಾರೆ. ನಮಗೆ ಅದ್ಯಾವುದು ಗೊತ್ತಾಗುವುದು ಇಲ್ಲ. ಏಕೆಂದರೆ ಹಗಲು-ರಾತ್ರಿ ನಾನು ಯಾವಾಗಲೂ ಕಾರ್ಯಕರ್ತರ ಜೊತೆಯಲ್ಲೇ ಇರುತ್ತೇನೆ. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಕುರಿತು ಸದಾ ಚಿಂತನೆ ನಡೆಸುತ್ತಿರುತ್ತೇನೆ. ಹೀಗಾಗಿ ಈ ವಿಷಯಗಳ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ ಎಂದರು.

ದಸರಾ ಉತ್ಸವನ್ನು ಯಾರು ಉದ್ಘಾಟನೆ ಮಾಡಬೇಕು ಎನ್ನುವ ವಿಚಾರವನ್ನು ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿದ್ದರು. ಅದರಂತೆ ಮುಖ್ಯಮಂತ್ರಿಗಳು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

32 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

37 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

41 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

46 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

51 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

59 mins ago