gt devegowda
ಮೈಸೂರು : ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ದಸರಾವನ್ನು ಉದ್ಘಾಟನೆ ಮಾಡುತ್ತಾರೆ. ನಂಬಿಕೆ ಇಲ್ಲ ಅಂದರೆ ಅವರು ಬರುವುದೇ ಇಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಬಹಳ ಚುಟುಕಾಗಿ ತಿಳಿಸಿದರು.
ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಕೂಡ ಕೆ.ಎಸ್.ನಿಸಾರ್ ಅಹಮ್ಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಕೆಲವರು ಆ ಅಧ್ಯಯನ, ಈ ಅಧ್ಯಯನ ಎನ್ನುತ್ತಾ ಮಾತನಾಡುತ್ತಾರೆ. ನಮಗೆ ಅದ್ಯಾವುದು ಗೊತ್ತಾಗುವುದು ಇಲ್ಲ. ಏಕೆಂದರೆ ಹಗಲು-ರಾತ್ರಿ ನಾನು ಯಾವಾಗಲೂ ಕಾರ್ಯಕರ್ತರ ಜೊತೆಯಲ್ಲೇ ಇರುತ್ತೇನೆ. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಕುರಿತು ಸದಾ ಚಿಂತನೆ ನಡೆಸುತ್ತಿರುತ್ತೇನೆ. ಹೀಗಾಗಿ ಈ ವಿಷಯಗಳ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ ಎಂದರು.
ದಸರಾ ಉತ್ಸವನ್ನು ಯಾರು ಉದ್ಘಾಟನೆ ಮಾಡಬೇಕು ಎನ್ನುವ ವಿಚಾರವನ್ನು ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿದ್ದರು. ಅದರಂತೆ ಮುಖ್ಯಮಂತ್ರಿಗಳು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…