ಮೈಸೂರು ನಗರ

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುದ್ಧಗಳು ಉದ್ದೇಶಪೂರಿತವಾಗಿ ನಡೆದು ಹಲವರು ಜನರು ಸವಾನ್ನಪ್ಪುತ್ತಾರೆ. ರಸ್ತೆ ಅಪಘಾತದಲ್ಲಿ ಯಾವುದೇ ಉದ್ದೇಶವಿಲ್ಲದೆ ಅಂದಾಜು ದೇಶದಲ್ಲಿ ಪ್ರತಿ ವರ್ಷ ಅಂದಾಜು 2 ಲಕ್ಷ ಜನರು ಮರಣ ಹೊಂದುತ್ತಾರೆ ಎಂದರೆ ಇದು ಚಿಂತಿಸುವ ವಿಷಯವಾಗಿದೆ ಎಂದರು.

ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದೇ ಇರುವುದು, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ರಸ್ತೆ ಅಪಘಾತ ಹಾಗೂ ರಸ್ತೆ ಅಪಘಾತದ ಮರಣಕ್ಕೆ ಮುಖ್ಯ ಕಾರಣವಾಗಿರುತ್ತದೆ. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು ಎಂಬುವುದು ಸಾಮಾನ್ಯ ಜ್ಞಾನ ಇದಕ್ಕೆ ಯಾವುದೇ ಪದವಿ ಬೇಡ. ಹೆಚ್ಚು ವಿದ್ಯಾವಂತರು ಸಹ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸದೇ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವ ಉದಾಹರಣೆಗಳಿವೆ. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡುವ ರೀತಿ ಮನಸ್ಥಿತಿ ಬದಲಾವಣೆ ಮಾಡಬೇಕು. ಇದಕ್ಕೆ ಇರುವ ದಾರಿ ಎಂದರೆ ಒಂದು ಜಾಗೃತಿ ಮೂಡಿಸುವುದು ಇನ್ನೊಂದು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸಂಚಾರಿ ನಿಯಮಗಳನ್ನು ಜಾರಿಗೊಳಿಸುವುದು ಎಂದರು.

ಕಳೆದ 5 ವರ್ಷಗಳಿಂದ ಹೆಚ್ಚು ರಸ್ತೆ ಅಫಘಾತಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯ 5 ನೇ ಸ್ಥಾನ ಹಾಗೂ ಮೈಸೂರು ಜಿಲ್ಲೆ 10 ನೇ ಸ್ಥಾನದೊಳಗಿದೆ. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಗುಣಮಟ್ಟದ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ರಸ್ತೆ ಗುಂಡಿಗಳು ಮತ್ತು ಬ್ಲ್ಯಾಕ್ ಸ್ಪಾಟ್ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

ಇದನ್ನೂ ಓದಿ:-ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಮೈಸೂರು ಜಿಲ್ಲೆ ಪ್ರವಾಸಿ ತಾಣವಾಗಿದ್ದು, ಖಾಸಗಿ ಬಸ್ ಗಳ ಸಂಚಾರ ಹೆಚ್ಚಿರುತ್ತದೆ. ಖಾಸಗಿ ಬಸ್ ಗಳು ಉತ್ತಮ ಸ್ಥಿತಿಯಲ್ಲಿರುವ ಬಗ್ಗೆ ಹಾಗೂ ಸರ್ಕಾರ ವಿಧಿಸಿರುವ ನಿಯಮಗಳ ಪಾಲನೆ, ವಾಹನ ಚಾಲಕರ ಪರವಾನಗಿ ಹಾಗೂ ವಾಹನ ವಿಮೆಯ ಬಗ್ಗೆ ನಿಗದಿತವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು‌ ಎಂದರು.

ನಗರ ಪ್ರದೇಶಗಳಿಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ರಸ್ತೆ ಅಪಘಾತವಾಗಿ ಜನರು‌ ಮರಣ ಹೊಂದುತ್ತಾರೆ. ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲೂ ಆಯೋಜಿಸಬೇಕು. ಜಾಗೃತಿ ಮೂಡಿಸಲು ಹೆಚ್ಚಿನ ಜನರನ್ನು ಆಕರ್ಷಿಸುವ ರೀತಿ ತಾಂತ್ರಿಕ ಸಂಚಾರಿ ಪಾಕ್೯ ( technical traffic park) ನಿರ್ಮಿಸಿ ಸಂಚಾರಿ ನಿಯಮಗಳನ್ನು ತಿಳಿಸಿ ಎಂದರು.

ಸರ್ಕಾರಿ ಕಚೇರಿಗಳು, ದೊಡ್ಡ ಕಂಪನಿಗಳು ಶಾಲಾ ಕಾಲೇಜುಗಳಿಗೆ ಬರುವ ದ್ವಿಚಕ್ರ ವಾಹನಗಳಲ್ಲಿ ಬರುವ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಪ್ರತಿದಿನ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಭೆ ನಡೆಸಿ ಮುಖ್ಯಸ್ಥರಿಗೆ ತಿಳಿಸಿ ಹೆಲ್ಮೆಟ್ ಧರಿಸುವುದನ್ನು ರೂಢಿಸುವ ಪ್ರಯತ್ನ ಮಾಡಿ ಎಂದರು.

ಜಿಲ್ಲಾಧಿಕಾರಿ ಲಜ್ಷ್ಮೀಕಾಂತ ರೆಡ್ಡಿ ಜಿ ಅವರು 2020 ರಿಂದ 2025 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳು, ಮರಣ ಹೊಂದಿದವರ ಸಂಖ್ಯೆ, ಗುರುತಿಸಿರುವ ಬ್ಲ್ಯಾಕ್ ಸ್ಪಾಟ್ ಗಳು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕಾರ್ ಅವರು ಮೈಸೂರು ನಗರ ಪ್ರದೇಶದ ಮುಖ್ಯ ಭಾಗಗಳಲ್ಲಿ ಅಳವಡಿಸಿರುವ ಕ್ಯಾಮರಾಗಳು ಹಾಗೂ ಹೆಚ್ಚಿನ ಅಪಘಾತಗಳಾಗುವ ರಸ್ತೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

22 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

34 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

1 hour ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago