ಮೈಸೂರು ನಗರ

ನಿಜ ಕೂಗೂಮಾರಿ ಪ್ರತಾಪ್‌ ಸಿಂಹ : ಸುಬ್ರಹ್ಮಣ್ಯ ಲೇವಡಿ

ಮೈಸೂರು : ಕೂಗು ಮಾರಿಗಳಿರುವುದು ರಾಜ್ಯ ಸರ್ಕಾರದಲ್ಲಿ ಅಲ್ಲ, ನಿಜವಾದ ಕೂಗುಮಾರಿ ಪ್ರತಾಪ್ ಸಿಂಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಲೇವಡಿ ಮಾಡಿದ್ದಾರೆ.

ಮೈಸೂರು ದಸರಾಕ್ಕೆ ಮೊದಲ ಕೂಗುಮಾರಿಯೇ ಪ್ರತಾಪ್‌ಸಿಂಹ. ಬಾನು ಮುಷ್ತಾಕ್ ಅವರ ಯಾವುದೋ ಒಂದು ವೀಡಿಯೋ ತುಣುಕನ್ನು ಹಾಕಿ ಇಡೀ ಹಿಂದೂ-ಮುಸ್ಲಿಂ ಬಾಂಧವರ ನಡುವೆ ಎತ್ತಿಕಟ್ಟುವ ಕೆಲಸ ಮಾಡಿದ್ದು ಇದೇ ಪ್ರತಾಪ್ ಸಿಂಹ. ಹೈಕೋರ್ಟ್, ಸುಪ್ರೀಂಕೋರ್ಟ್‌ನಲ್ಲೂ ಛೀಮಾರಿ ಹಾಕಿಸಿಕೊಂಡರು. ಜನರ ಕಾಯಕ ಮಾಡುತ್ತಿರುವ ಸಿದ್ದರಾಮಯ್ಯನವರ ಜನಪರ ಕೆಲಸಗಳು ಪ್ರತಾಪ್ ಸಿಂಹ ಅವರಿಗೆ ಕಾಣುತ್ತಿಲ್ಲ. ಹೀಗಾಗಿ ಪದೇ ಪದೇ ಮೈಸೂರಿನಲ್ಲಿ ತಾನು ಬದುಕಿದ್ದೇನೆ ಎಂಬುದನ್ನು ತೋರಿಸಲು ಟೀಕೆ ಮಾಡುತ್ತಿರುವ ನಿಜವಾದ ಕೂಗುಮಾರಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:-ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ನಡೆದದ್ದು ಘೋರ ಕೃತ್ಯ, ಅದನ್ನು ಯಾರೂ ಸಹಿಸಲ್ಲ. ಕೃತ್ಯ ಎಸಗಿದ ಕಿಡಿಗೇಡಿಯನ್ನ ಗಲ್ಲಿಗೇರಿಸಬೇಕು ಎಂಬುದೂ ನಮ್ಮ ಒತ್ತಾಯವೂ ಆಗಿದೆ. ಈ ಘಟನೆ ದಸರಾ ಮುಗಿದ ಮೇಲೆ ಆಗಿದೆ. ಇದನ್ನು ನಾಡಹಬ್ಬಕ್ಕೆ ಹೋಲಿಸಿ ಧಕ್ಕೆ ತರುವುದು ಸಲ್ಲದು. ಅಲ್ಲದೇ ಘಟನೆಗೆ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ. ಎನ್‌ಡಿಎ ಅಧಿಕಾರದಲ್ಲಿ ಇರುವ ಬಿಹಾರದಲ್ಲಿ, ಬಿಜೆಪಿ ಇರುವ ಉತ್ತರ ಪ್ರದೇಶದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ತಾಕತ್ತಿದ್ದರೆ ಹೋಗಿ ಯೋಗಿ ಅವರ ವಿರುದ್ಧ ಪ್ರತಾಪ್‌ಸಿಂಹ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ಇನ್ನು ನಳಪಾಕ್‌ನಲ್ಲಿ ಕಾಫಿ ಕುಡಿಯಲು, ಮೈಲಾರಿ ದೋಸೆ ತಿನ್ನಲು ಅಷ್ಟೇ ಪೊಲೀಸರ ಬಳಕೆ ಮಾಡುತ್ತಿ ದ್ದಾರೆ ಎನ್ನುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ಭದ್ರತೆ ಕೊಡುವುದು ಸಿದ್ದರಾಮಯ್ಯ ಅಂತ ಅಲ್ಲ. ಮುಖ್ಯಮಂತ್ರಿಗಳು ಯಾರಿದ್ದರೂ ಅವರಿಗೆ ಸೂಕ್ತ ಭದ್ರತೆ ಕೊಟ್ಟೇ ಕೊಡುತ್ತಾರೆ. ಕಾರ್ಯಕ್ರಮ ನಿಮಿತ್ತ ಬಂದಾಗ ಊಟ, ತಿಂಡಿ ಮಾಡಲೇಬೇಕಲ್ಲವೇ? ಮೋದಿ ಅವರು ಮೈಸೂರಿನ ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾಗ ಎಷ್ಟು ಖರ್ಚಾಗಿತ್ತು? ಆಗ ಎಷ್ಟು ಜನ ಭದ್ರತೆಗೆ ಇದ್ದರು? ಇದ್ಯಾವುದು ತಲೆಯಲ್ಲಿ ಇಲ್ವೆ? ಮೋದಿ ಅವರನ್ನೂ ಹೀಗೇ ಪ್ರಶ್ನೆ ಮಾಡಲು ಪ್ರತಾಪ್‌ಸಿಂಹಗೆ ಧೈರ್ಯ ಇದೆಯಾ ? ಎಂದು ಕುಟುಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago