ಮೈಸೂರು ನಗರ

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ನಂತರ ಕರ್ನಾಟಕವೇ ಟಾರ್ಗೆಟ್. ರಾಜ್ಯದಲ್ಲಿ 15 ದಿನಗಳ ಹಿಂದೆ SIR ಪ್ರಕ್ರಿಯೆ ಮುಗಿಸಿದ್ದಾರೆ. ರಾಜ್ಯದಲ್ಲಿ 5.5 ಕೋಟಿ ಮತದಾರರ ಸಂಖ್ಯೆ ಇದೆ. SIR ಪ್ರಕಾರ 15% ಜನರನ್ನ ಮ್ಯಾಪಿಂಗ್ ಮಾಡಿಲ್ಲ. ಅಂದರೆ 80 ಲಕ್ಷ ಮತದಾರರನ್ನ ಹೊರಗಿಡುವ ಕೆಲಸ ಮಾಡಿದ್ದಾರೆ. ನನ್ನ ಹೆಸರು ಮ್ಯಾಪಿಂಗ್ ಆಗಲಿಲ್ಲ ಎಂದಾದರೆ ನನ್ನ ಮಕ್ಕಳ ಹೆಸರು ಸೇರ್ಪಡೆ ಆಗಲ್ಲ. ಇದು ಬಿಜೆಪಿ ಎಲೆಕ್ಷನ್ ಮಾಸ್ಟರ್ ಗಳ ಕೈವಾಡ. SIR ಮೂಲಕವೇ ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ತಮ್ಮದಾಗಿಸಿಕೊಂಡಿದ್ದಾರೆ. ಮಹಾರಾಷ್ಟ್ರ, ಬಿಹಾರ, ಪ. ಬಂಗಾಳಗಳಲ್ಲಿ ಮತಗಳನ್ನು ಲೂಟಿ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 27,99,744 ಮಂದಿ ಮತದಾರರಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 71,512 ಮತದಾರರನ್ನು ತೆಗೆದಿದ್ದಾರೆ. ನರಸಿಂಹರಾಜ ಕ್ಷೇತ್ರ 59,749 ಮತದಾರರನ್ನು ಕಿತ್ತು ಹಾಕಿದ್ದಾರೆ. ಈ ಮೂಲಕ 2028ರ ಚುನಾವಣೆಗೆ ಬಿಜೆಪಿ ತಯಾರು ಮಾಡಿಕೊಳ್ಳುತ್ತಿದ್ದಾರೆ. SIR ಅಸ್ತ್ರ ಬಳಸಿಕೊಂಡು 86 ಲಕ್ಷ ಮತದಾರರನ್ನು ರಾಜ್ಯದಲ್ಲಿ ಕಿತ್ತು ಹಾಕಿದ್ದಾರೆ. ಮೈಸೂರಿನ ಎನ್ ಆರ್ ನಲ್ಲಿ 43 ಸಾವಿರ ಮುಸ್ಲಿಂ ಮತದಾರರನ್ನು ಕಿತ್ತು ಹಾಕಿದ್ದಾರೆ. ಮುಂದೆ ತನ್ವಿರ್ ಸೇಠ್ ಹೇಗೆ ಚುನಾವಣೆ ಎದುರಿಸಬೇಕು? ಮತದ ಹಕ್ಕಿನಿಂದ ತೀರಸ್ಕೃತರಾದವರ ಬಳಿ ದಾಖಲೆ ಸಲ್ಲಿಸಲು ಹೇಳಿದ್ದಾರೆ. ತಾತ, ಮುತ್ತಾತನ ಮಾಹಿತಿಯ ದಾಖಲೆಗಳನ್ನು ಹೇಗೆ ಕೊಡಲು ಸಾಧ್ಯ? ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಹುತೇಕ 86 ಲಕ್ಷ ಮಂದಿ ಮತದಾರರು ಮತದಾನದಿಂದ ದೂರವಿಡುವ ಸಂಚು ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದು ಚಿನ್ನ ಖರೀದಿಸಬೇಡಿ ಎಂದು ಹೇಳಿ ಹೋಗಿದ್ದಾರೆ. ವಿದೇಶಕ್ಕೆ ಹೋಗಬೇಡಿ ಎಂದಿದ್ದಾರೆ. ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ ಎಂದಿದ್ದಾರೆ.
ಇದು ದೇಶದ ಒಬ್ಬ ಪ್ರಧಾನಿ ಜನಸಾಮಾನ್ಯರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಎಕನಾಮಿಕಲ್ ಎಮರ್ಜೆನ್ಸಿ ಇದೆ ಎಂದು ಮೋದಿ ಹೇಳಿ ಹೋಗಿದ್ದಾರೆ. ಗ್ಯಾಸ್ ಬೆಲೆ ಏರಿಕೆ ಹಾಗೂ ಇತರೆ ವಿಷಯಗಳು ದೇಶದಲ್ಲಿ ಚರ್ಚೆಗೆ ಬರುತ್ತಿಲ್ಲ. ಸಿದ್ದರಾಮಯ್ಯ ಕೂತರು, ನಿಂತರು ದಿನಪೂರ್ತಿ ಡಿಬೇಟ್ ಮಾಡುತ್ತಾರೆ. ಚಿನ್ನ ಖರೀದಿ ಮಾಡಬೇಡಿ ಎಂದಿರುವ ಬಗ್ಗೆ ಜೆಡಿಎಸ್ ಎಂ ಎಲ್ ಸಿ ಶರವಣ ಯಾಕೆ ಸೈಲೆಂಟ್ ಆಗಿದ್ದಾರೆ ಮಾತನಾಡಬೇಕಲ್ವಾ? ಎಂದು ಪ್ರಶ್ನೆ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago