dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಗಜಪಡೆ ಮೈಸೂರಿಗೆ ಆಗಮಿಸಲಿವೆ.
ಈಗಾಗಲೇ ಮೊದಲನೇ ತಂಡದ 9 ಆನೆಗಳು ಮೈಸೂರಿನ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಸುತ್ತಿವೆ. ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಐದು ಆನೆಗಳು ಮೈಸೂರಿಗೆ ಆಗಮಿಸಲಿದ್ದು, ದಸರಾ ಮಹೋತ್ಸವ ಇಂದಿನಿಂದ ಮತ್ತಷ್ಟು ರಂಗೇರಲಿದೆ.
ಮತ್ತಿಗೋಡು ಶಿಬಿರದಿಂದ ಶ್ರೀಕಂಠ (56), ಭೀಮನಕಟ್ಟೆ ಆನೆ ಶಿಬಿರದಿಂದ ರೂಪ (44), ದುಬಾರಿ ಆನೆ ಶಿಬಿರದಿಂದ ಗೋಪಿ (42), ಸುಗ್ರೀವ (43) ಹಾಗೂ ಹೇಮಾವತಿ (11) ಆನೆಗಳು ಇಂದು ಸಂಜೆ 4 ಗಂಟೆ ಸುಮಾರಿಗೆ ಅರಮನೆ ಆವರಣಕ್ಕೆ ಎಂಟ್ರಿಯಾಗಲಿವೆ.
ನಾಳೆಯಿಂದ ಒಟ್ಟು 14 ಆನೆಗಳು ತಾಲೀಮು ನಡೆಸಲಿದ್ದು, ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಿವೆ.
ಇನ್ನು ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಈ ಬಾರಿ ಅದ್ಧೂರಿ ದಸರಾ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಕೂಡ ದಸರಾದ ರೂಪುರೇಷೆಗಳನ್ನು ತಯಾರು ಮಾಡಿಕೊಂಡಿದೆ.
ಈಗಾಗಲೇ ದಸರಾ ಉದ್ಘಾಟಕರ ಹೆಸರು ಕೂಡ ಘೋಷಣೆಯಾಗಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…