ಮೈಸೂರು ನಗರ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಇಂದು ಎರಡನೇ ತಂಡದ ಗಜಪಡೆ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಗಜಪಡೆ ಮೈಸೂರಿಗೆ ಆಗಮಿಸಲಿವೆ.

ಈಗಾಗಲೇ ಮೊದಲನೇ ತಂಡದ 9 ಆನೆಗಳು ಮೈಸೂರಿನ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಸುತ್ತಿವೆ. ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಐದು ಆನೆಗಳು ಮೈಸೂರಿಗೆ ಆಗಮಿಸಲಿದ್ದು, ದಸರಾ ಮಹೋತ್ಸವ ಇಂದಿನಿಂದ ಮತ್ತಷ್ಟು ರಂಗೇರಲಿದೆ.

ಮತ್ತಿಗೋಡು ಶಿಬಿರದಿಂದ ಶ್ರೀಕಂಠ (56), ಭೀಮನಕಟ್ಟೆ ಆನೆ ಶಿಬಿರದಿಂದ ರೂಪ (44), ದುಬಾರಿ ಆನೆ ಶಿಬಿರದಿಂದ ಗೋಪಿ (42), ಸುಗ್ರೀವ (43) ಹಾಗೂ ಹೇಮಾವತಿ (11) ಆನೆಗಳು ಇಂದು ಸಂಜೆ 4 ಗಂಟೆ ಸುಮಾರಿಗೆ ಅರಮನೆ ಆವರಣಕ್ಕೆ ಎಂಟ್ರಿಯಾಗಲಿವೆ.

ನಾಳೆಯಿಂದ ಒಟ್ಟು 14 ಆನೆಗಳು ತಾಲೀಮು ನಡೆಸಲಿದ್ದು, ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಿವೆ.

ಇನ್ನು ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಈ ಬಾರಿ ಅದ್ಧೂರಿ ದಸರಾ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಕೂಡ ದಸರಾದ ರೂಪುರೇಷೆಗಳನ್ನು ತಯಾರು ಮಾಡಿಕೊಂಡಿದೆ.

ಈಗಾಗಲೇ ದಸರಾ ಉದ್ಘಾಟಕರ ಹೆಸರು ಕೂಡ ಘೋಷಣೆಯಾಗಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

27 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

28 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

32 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

35 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

3 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

3 hours ago