congress yathra
ಮೈಸೂರು: ಧರ್ಮಸ್ಥಳ ವಿಚಾರವಾಗಿ ಎಸ್ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಬಿಜೆಪಿ, ಜೆಡಿಎಸ್ ರೀತಿ ರಾಜಕೀಯ ಪ್ರೇರಿತ ಯಾತ್ರೆಯಲ್ಲ. ನಾವು ಮಾಡುತ್ತಿರುವುದು ಧರ್ಮ ವಿಜಯ ಯಾತ್ರೆ. ಧರ್ಮಸ್ಥಳ ವಿಚಾರವಾಗಿ ಎಸ್ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ. ಆ ಮೂಲಕ ಶ್ರೀಕ್ಷೇತ್ರದ ಮೇಲೆ ಇದ್ದ ಕಳಂಕ ದೂರು ಮಾಡುವ ಕೆಲಸ ಮಾಡಿದ್ದೇವೆ.
ಇದನ್ನು ಓದಿ: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವುದಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ
ಈಗಾಗಿ ನಮ್ಮದು ನಿಜವಾದ ಧರ್ಮಯಾತ್ರೆ. ನಾವೆಲ್ಲರೂ ಶಿವನ ಆರಾಧಕರು. ಇಲ್ಲಿಂದ ತೆರಳಿ ಒಂದು ದಿನ ತಂಗಿದ್ದು, ನಾಳೆ ದರ್ಶನ ಮಾಡಿ ಬರುತ್ತೇವೆ. ಈಗಾಗಲೇ ಧರ್ಮಾಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಅಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ನಮ್ಮ ಪಕ್ಷದ ಒಪ್ಪಿಗೆ ಕೂಡ ಇದೆ. ನಮ್ಮ ಪಕ್ಷ ಧರ್ಮಾತೀತವಾದದ್ದು. ಹಿಂದೂ, ಮುಸ್ಲಿಂ, ಬೌದ್ಧ ಸೇರಿ ಎಲ್ಲಾ ಧರ್ಮವನ್ನು ಆರಾಧಿಸುತ್ತೇವೆ. ಕ್ಷೇತ್ರದಲ್ಲಿರುವ ಧರ್ಮಸ್ಥಳ ಭಕ್ತಾಧಿಗಳ ಭಾವನೆಗೆ ಸ್ಪಂದಿಸಿ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…