ಮೈಸೂರು ನಗರ

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅಮೆರಿಕದ ಶ್ವೇತಭವನದ ಸಮೀಪ ಹಿಲ್ಟನ್ ಹೋಟೆಲ್‌ನಲ್ಲಿ ಆಯೋಜನೆಗೊಂಡಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿಯನ್ನು ಭದ್ರತಾ ಪಡೆಗಳು ಬಂಧಿಸಿ ಈಗ ವಿಚಾರಣೆ ನಡೆಸುತ್ತಿದ್ದಾರೆ.

ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ ಮೂಲದ ಕೋಲ್ ಥಾಮಸ್ ಅಲೆನ್(31) ಬಂಧಿತ ಆರೋಪಿ. ವೃತ್ತಿಯಲ್ಲಿ ಈತ ಶಿಕ್ಷಕ ಮತ್ತು ವಿಡಿಯೋ ಗೇಮ್ ಡೆವಲಪರ್ ಆಗಿದ್ದಾನೆ. 2017 ರಲ್ಲಿ ಕ್ಯಾಲಿಫೋರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ ಈತ 2025 ರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿ-ಡೊಮಿಂಗ್ಯೂಜ್ ಹಿಲ್ಸ್‌ನಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾನೆ. 2014 ರಲ್ಲಿ ನಾಸಾದಲ್ಲೂ ಇಂಟರ್ನ್‌ಶಿಪ್ ಮಾಡಿದ್ದನು. ‌ಥಾಮಸ್ ಅಲೆನ್ ಡಿಸೆಂಬರ್ 2024 ರಲ್ಲಿ ಶಿಕ್ಷಣ ಸಂಸ್ಥೆಯೊಂದರಲ್ಲಿ ‘ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಯನ್ನೂ ಪಡೆದಿದ್ದ ಎಂದು ವರದಿಯಾಗಿದೆ.‌

ಹೋಟೆಲ್‌ಗೆ ನುಗ್ಗಿದ್ದು ಹೇಗೆ?
ಡಿನ್ನರ್‌ ಆಯೋಜನೆಗೊಳ್ಳುವ ಮೊದಲೇ ಕೋಲ್ ಥಾಮಸ್ ಅಲೆನ್ ರೂಮ್‌ ಬುಕ್‌ ಮಾಡಿ ಅತಿಥಿಯಾಗಿ ಪ್ರವೇಶ ಮಾಡಿದ್ದ. ಸಾಮಾನ್ಯವಾಗಿ ಅತಿಥಿಗಳು ಪ್ರವೇಶ ಮಾಡುವಾಗ ಇಲ್ಲಿ ಬಿಗಿಯಾದ ಭದ್ರತಾ ತಪಾಸಣೆಗೆ ಒಳಪಡಿಸಿರಲಿಲ್ಲ. ಇದರಿಂದಾಗಿ ಆತ ಮೆಷಿನ್ ಗನ್, ಹ್ಯಾಂಡ್ ಗನ್ ಮತ್ತು ಚಾಕುಗಳನ್ನು ಸುಲಭವಾಗಿ ಒಳಗೆ ತಂದಿದ್ದ. ಅಷ್ಟೇ ಅಲ್ಲದೇ ಹೋಟೆಲಿನಲ್ಲಿ ಅತಿಥಿಗಳಿಗೆ ಲಾಬಿ ಮತ್ತು ಸಾರ್ವಜನಿಕ ಪ್ರದೇಶಗಳಿಗೆ ಪ್ರವೇಶಿಸಲು ಯಾವುದೇ ಕಠಿಣ ತಪಾಸಣೆ ಇರಲಿಲ್ಲ.‌

ಹೋಟೆಲ್‌ನ ಸಾಮಾನ್ಯ ಪ್ರದೇಶದಿಂದ ಬಾಲ್‌ರೂಮ್‌ ಗೆ (ಹೋಟೆಲ್‌ ಅಥವಾ ದೊಡ್ಡ ಕಟ್ಟಡಗಳಲ್ಲಿರುವ ಒಂದು ವಿಶಾಲವಾದ ಸಭಾಂಗಣ ಅಥವಾ ಹಾಲ್) ಹೋಗುವ ದಾರಿಯಲ್ಲಿ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ನಿರ್ಮಿಸಿದ್ದ ಮ್ಯಾಗ್ನೆಟೋಮೀಟರ್ ತಪಾಸಣಾ ಕೇಂದ್ರದ ಬಳಿಗೆ ಏಕಾಏಕಿ ನುಗ್ಗಿದ್ದ.

ಈ ವೇಳೆ ಭದ್ರತಾ ತಪಾಸಣಾ ಕೇಂದ್ರದ ಬಳಿ ಏಳೆಂಟು ಬಾರಿ ಗುಂಡು ಹಾರಿಸಿದರೂ, ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣ ಆತನನ್ನು ತಡೆದಿದ್ದಾರೆ. ಇದರಿಂದಾಗಿ ಆತ ಗಣ್ಯರು ಕುಳಿತಿದ್ದ ಬಾಲ್‌ರೂಮ್‌ನ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಏಜೆಂಟ್‌ಗಳು ಕೋಲ್ ಅಲೆನ್ ಎದುರಿಸಿ, ಆತ ಮತ್ತಷ್ಟು ಗುಂಡು ಹಾರಿಸದಂತೆ ಕೆಳಕ್ಕೆ ತಳ್ಳಿದ್ದಾರೆ. ಈ ಸಂದರ್ಭದಲ್ಲಿ ನಡೆದ ಸಂಘರ್ಷದಲ್ಲಿ ಒಬ್ಬ ಏಜೆಂಟ್‌ಗೆ ಗುಂಡು ತಗುಲಿತಾದರೂ ಬುಲೆಟ್ ಪ್ರೂಫ್ ಜಾಕೆಟ್ ಅವರನ್ನು ರಕ್ಷಿಸಿದೆ. ಕೋಲ್ ಅಲೆನ್ ಬಳಿ ಶಾರ್ಟ್‌ಗನ್, ಹ್ಯಾಂಡ್‌ಗನ್ ಹೊರತಾಗಿ ಒಂದಕ್ಕಿಂತ ಹೆಚ್ಚು ಚಾಕುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಕೋರನನ್ನು ತಡೆಯುತ್ತಿದ್ದಾಗಲೇ ಮತ್ತೊಂದು ತಂಡ ಅಧ್ಯಕ್ಷ ಟ್ರಂಪ್ ಅವರನ್ನು ಸುರಕ್ಷಿತವಾಗಿ ಸಭಾಂಗಣದಿಂದ ಹೊರಗೆ ಕರೆತಂದು ರಕ್ಷಣೆ ಮಾಡಿ ಶ್ವೇತ ಭವನಕ್ಕೆ ಕರೆ ತಂದಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago