ಮೈಸೂರು: ವೈಚಾರಿಕ ಕರ್ನಾಟಕ ಕಟ್ಟುವ ಕೆಲಸ ಕನ್ನಡಿಗರಿಂದ ಆಗಬೇಕಿದೆ ಎಂದು ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಸಲಹೆ ನೀಡಿದರು.
ಇಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಸುವರ್ಣ ಕರ್ನಾಟಕ ಅಂಗವಾಗಿ ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕನ್ನಡ-ಕರ್ನಾಟಕ-ಕನ್ನಡಿಗ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುವರ್ಣ ಕರ್ನಾಟಕದಲ್ಲಿ ಇಂದು ಹಿತ್ತಾಳೆ ಕರ್ನಾಟಕ ಆಗಿದೆ. ಹಿತ್ತಾಳೆಗೆ ಚಿನ್ನದ ಲೇಪನ ಮಾಡಲಾಗಿದೆ. ಕನ್ನಡ ಬೇರೆ ಅಲ್ಲ ಕುವೆಂಪು ಬೇರೆ ಅಲ್ಲ. ಕುವೆಂಪು ವೈಚಾರಿಕತೆಯ ಜೊತೆ ಕರ್ನಾಟಕವನ್ನು ಕಾಣಬೇಕು ಎಂದು ಅಭಿಪ್ರಾಯಪಟ್ಟರು.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಲೋಲಾಕ್ಷಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡ 50 ವರ್ಷಗಳ ಸವಿನೆನಪಿಗಾಗಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಈ ಮೂಲಕ ಸುವರ್ಣ ಕರ್ನಾಟಕವನ್ನು ಸಂಭ್ರಮಿಸುತ್ತಾ, ಭವಿಷ್ಯದ ನಾಡಿಗೆ ತೆರೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಮಧ್ಯಾಹ್ನ ನಡೆದ ‘ಕನ್ನಡ ಚಲನಚಿತ್ರ ಮತ್ತು ಶ್ರೀ ಸಾಮಾನ್ಯನ ಬದುಕು’ ಎಂಬ ವಿಷಯ ಕುರಿತು ಶಿವಮೊಗ್ಗ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಪ್ರಶಾಂತ್ ನಾಯಕ್ ಮಾತನಾಡಿದರು. ಇನ್ನು ‘ಜಾಗತೀಕರಣ ಮತ್ತು ಜನಪದ ಭಾಷೆ’ ಕುರಿತು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ನಂಜಯ್ಯ ಹೊಂಗನೂರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಜರಿದ್ದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…