ಮೈಸೂರು ನಗರ

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ

ಮೈಸೂರು:  ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ:-ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್‌ ಗೌಡ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದ ಅವರು, ಮಹಿಳೆಯರಿಗೆ ಕಾನೂನು ಅರಿವು ವೈಯಕ್ತಿಕ ಮತ್ತು ಸಾಮುದಾಯಿಕವಾಗಿ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಅವರು, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದು ಹೆಣ್ಣುಮಕ್ಕಳು ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟ ಆಗಲಿದೆ ಎಂದು ಎಚ್ಚರಿಸಿದರು.

ವಿಭಾಗದ ಮುಖ್ಯಸ್ಥ ಗೋವಿಂದರಾಜು, ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್, ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್. ಅಧ್ಯಾಪಕ ದಿನೇಶ್ ಎಚ್.ಆರ್, ಡಾ. ಆನಂದ್ ಎಚ್. ಸಿ, ಅಧ್ಯಾಪಕರು, ಅಧ್ಯಾಪಕೇತರರು, ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

7 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

7 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

8 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

8 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 hours ago