ಮೈಸೂರು: ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ:-ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್ ಗೌಡ
ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದ ಅವರು, ಮಹಿಳೆಯರಿಗೆ ಕಾನೂನು ಅರಿವು ವೈಯಕ್ತಿಕ ಮತ್ತು ಸಾಮುದಾಯಿಕವಾಗಿ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಅವರು, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದು ಹೆಣ್ಣುಮಕ್ಕಳು ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟ ಆಗಲಿದೆ ಎಂದು ಎಚ್ಚರಿಸಿದರು.
ವಿಭಾಗದ ಮುಖ್ಯಸ್ಥ ಗೋವಿಂದರಾಜು, ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್, ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್. ಅಧ್ಯಾಪಕ ದಿನೇಶ್ ಎಚ್.ಆರ್, ಡಾ. ಆನಂದ್ ಎಚ್. ಸಿ, ಅಧ್ಯಾಪಕರು, ಅಧ್ಯಾಪಕೇತರರು, ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…