ಮೈಸೂರು ನಗರ

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ

ಮೈಸೂರು:  ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ:-ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್‌ ಗೌಡ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದ ಅವರು, ಮಹಿಳೆಯರಿಗೆ ಕಾನೂನು ಅರಿವು ವೈಯಕ್ತಿಕ ಮತ್ತು ಸಾಮುದಾಯಿಕವಾಗಿ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಅವರು, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದು ಹೆಣ್ಣುಮಕ್ಕಳು ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟ ಆಗಲಿದೆ ಎಂದು ಎಚ್ಚರಿಸಿದರು.

ವಿಭಾಗದ ಮುಖ್ಯಸ್ಥ ಗೋವಿಂದರಾಜು, ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್, ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್. ಅಧ್ಯಾಪಕ ದಿನೇಶ್ ಎಚ್.ಆರ್, ಡಾ. ಆನಂದ್ ಎಚ್. ಸಿ, ಅಧ್ಯಾಪಕರು, ಅಧ್ಯಾಪಕೇತರರು, ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

28 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

29 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

32 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

34 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

42 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

48 mins ago