ಮೈಸೂರು ನಗರ

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ

ಮೈಸೂರು:  ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ:-ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್‌ ಗೌಡ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದ ಅವರು, ಮಹಿಳೆಯರಿಗೆ ಕಾನೂನು ಅರಿವು ವೈಯಕ್ತಿಕ ಮತ್ತು ಸಾಮುದಾಯಿಕವಾಗಿ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಅವರು, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದು ಹೆಣ್ಣುಮಕ್ಕಳು ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟ ಆಗಲಿದೆ ಎಂದು ಎಚ್ಚರಿಸಿದರು.

ವಿಭಾಗದ ಮುಖ್ಯಸ್ಥ ಗೋವಿಂದರಾಜು, ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್, ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್. ಅಧ್ಯಾಪಕ ದಿನೇಶ್ ಎಚ್.ಆರ್, ಡಾ. ಆನಂದ್ ಎಚ್. ಸಿ, ಅಧ್ಯಾಪಕರು, ಅಧ್ಯಾಪಕೇತರರು, ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

9 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

9 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

11 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago