ಮೈಸೂರು ನಗರ

ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿವೆ: ಪ್ರೊ.ಎನ್.ಕೆ.ಲೋಕನಾಥ್

ಮೈಸೂರು: ಇಂದು ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ. ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲುಂದ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು.

ಇಂದು ನಗರದ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಗುರುವಾರ ಏರ್ಪಡಿಸಿದ್ದ ಏನ್ ಸಮಾಚಾರ. ! ಮೀಡಿಯಾ ಹಬ್ಬ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯೆ, ವಸ್ತುನಿಷ್ಠತೆ ,ನಿರಂತರ ಶ್ರಮ, ಸದೃಢ ಮನಸ್ಥಿತಿ, ಈ ಅಂಶಗಳನ್ನು ಪತ್ರಿಕೋದ್ಯಮ ಮತ್ತು ಸಂವಹನದ ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗುತ್ತಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಒಂದೇ ವಿಚಾರದ ಬಗ್ಗೆ ಚರ್ಚಿಸುತ್ತಿದ್ದಾರೆ. ಇಂದಿನ ತಂತ್ರಜ್ಞಾನದ ದಿನಗಳಲ್ಲಿ ಡಿಜಿಟಲ್ ಬಳಸಿಕೊಳ್ಳುತ್ತಾರೆ. ಮಕ್ಕಳಿಗೆ ಹೆಚ್ಚು ಓದು ಹವ್ಯಾಸವಿಲ್ಲ. ನಿಜವಾದ ಪತ್ರಕರ್ತರಾದವರು ಚೆನ್ನಾಗಿ ಓದಬೇಕು. ನೀವು ಬರೆದ ಲೇಖನದ ಬಗ್ಗೆ ಮಾತನಾಡಬೇಕು. ಸುದ್ದಿಯಲ್ಲಿ ನಿಖರತೆ ವಸ್ತು ನಿಷ್ಠೆ ಪ್ರಾಮಾಣಿಕತೆ ಇರಬೇಕು ಎಂದು ಹೇಳಿದರು.

ಸತ್ಯಕ್ಕಿಂತ ಸುಳ್ಳು ತುಂಬಾ ವೈರಲ್ ಆಗುತ್ತಿದೆ. ಪತ್ರಿಕೋದ್ಯಮದ ಭವಿಷ್ಯ ನಿಮ್ಮ ಕೈಯಲ್ಲಿದೆ.
ಉತ್ತಮ ಪತ್ರಕರ್ತರು ಆಗಬೇಕು ಎಂದರೆ ಒಂದು ವಿಷಯವನ್ನು ಹೊಸ ತನದಿಂದ ವಿಶ್ಲೇಷಣೆ ಮಾಡಬೇಕು. ಆಳವಾದ ಅಧ್ಯಯನ ಬಹಳ ಮುಖ್ಯವಾಗಿದ್ದು ಸತ್ಯ ಎಂಬುದನ್ನು ಅರಿತುಕೊಂಡು ಪತ್ರಕರ್ತರಾಗುವ ಜೊತೆ ಸಮಾಜ ತಿದ್ದುವ ಕೆಲಸ ವಾಗಬೇಕು ಎಂದು ತಿಳಿಸಿದರು.

ಎನ್.ಡಿ.ಟಿ.ವಿ. ಮಾಜಿ ಕಾರ್ಯ ನಿರ್ವಾಹಕ ಸಂಪಾದಕರಾದ ಮಾಯಾ ಶರ್ಮಾ ಅವರು ಮಾತನಾಡಿ, ಮಾಹಿತಿ ಪ್ರಮುಖ ಶಕ್ತಿಯಾಗಿ ಪಾತ್ರವಹಿಸುತ್ತದೆ. ಪ್ರೆಸ್‌ ರ‍್ಯಾಂಕಿಂಗ್‌ ಕಡಿಮೆ ಆಗುತ್ತಿದೆ ಎಂದು ಭಾವಿಸಬಾರದು. ಮೀಡಿಯಾ ಇಂದು ಒನ್ ಸೈಡ್ ಆಗುತ್ತದೆ ಅದರೆ ನಿಮ್ಮಲ್ಲಿ ಎಥಿಕಲ್‌ ವ್ಯಾಲ್ಯೂ ಇರಬೇಕು ಎಂದು ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯಾಷಾ ಖಾನಂ ಮಾತನಾಡಿ, ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರದ ಬಗ್ಗೆ ಆಲೋಚಿಸುತ್ತಾರೆ. ಅದರಂತೆ ಮಾಧ್ಯಮ ಕ್ಷೇತ್ರದ ಬಗ್ಗೆ ಉತ್ತಮ ಆಲೋಚನೆ ಇರುವುದರಿಂದ ಮಿಡಿಯಾ ಹಬ್ಬ ಆಚರಿಸುತ್ತಿದ್ದೇವೆ. ಇಂದು ಪತ್ರಿಕೋದ್ಯಮದ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಯುವ ಪತ್ರಕರ್ತರು ಅದನ್ನು ಬದಲಿಸಬೇಕು. ಉತ್ತಮ ವಿಷಯಗಳ ಬಗ್ಗೆ ಚರ್ಚೆ ಆಗಬೇಕು. ಕಲ್ಯಾಣ ಕರ್ನಾಟಕದ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಪತ್ರಕರ್ತಕರು ಕ್ಯಾಂಪಸ್ ನಲ್ಲಿ ಇರುವಾಗ ಎಂಜಾಯ್ ಮಾಡಿ. ಅದರೆ, ಹೊರಗೆ ಹೋದಾಗ ಪ್ರಶ್ನಿಸುವ ಮುನ್ನ ಅದರ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿಯ ರಿಜಿಸ್ಟ್ರಾರ್ ಸಹನಾ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಮಮತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಹಾಗೂ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 mins ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

11 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

23 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

3 hours ago