ಮೈಸೂರು ನಗರ

ರಾಹುಲ್‌ ಗಾಂಧಿ ಜೊತೆ ಯಾವ ಮಾತುಕತೆಯೂ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಧಿಕಾರ ಹಂಚಿಕೆ‌ ವಿಚಾರ ಕುರಿತಂತೆ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಬಂದರು ಕಾರ್ಯಕ್ರಮಕ್ಕೆ ತೆರಳಿದರು. ಸಂಜೆ ವಾಪಸ್ ಬರುತ್ತಾರೆ ವಾಪಸ್ ತೆರಳುತ್ತಾರೆ. ರಾಹುಲ್ ಗಾಂಧಿ ಕಮಿಂಗ್ ಅಂಡ್ ಗೋಯಿಂಗ್ ಅಷ್ಟೇ. ಯಾವ ಸಭೆಯೂ ಇಲ್ಲ ಯಾವ ಮಾತುಕತೆ ಇಲ್ಲ. ಸಂಜೆಯೂ ಯಾವ ಮಾತುಕತೆಯೂ ಇರುವುದಿಲ್ಲ. ಸಂಜೆ ನಾನೇ ಬಂದು ಬೀಳ್ಕೊಡುತ್ತೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಇನ್ನು ಅಧಿಕಾರ ಹಂಚಿಕೆ‌ ವಿಚಾರ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ, ಯಾವ ಸಮಸ್ಯೆಯೂ ಇಲ್ಲ. ಯಾರೋ ಎಂಎಲ್ಎಗಳು ಏನೋ ಗೊತ್ತಿಲ್ಲ ದೇಏನೋ ಹೇಳುತ್ತಾರೆ. ಅವರಿಗೆ ಏನು ಗೊತ್ತು ರೀ.? ಮಾತನಾಡಬೇಕಿರುವುದು ನಾನು ಮತ್ತು ಡಿ.ಕೆ.ಶಿವಕುಮಾರ್. ಡಿ.ಕೆ ಶಿವಕುಮಾರ್ ಏನಾದ್ರು ಮಾತನಾಡಿದ್ದಾರಾ? ನಾನೇನಾದ್ರು ಮಾತನಾಡಿದ್ದೀನಾ.? ಯಾರೋ ಮಾಹಿತಿ ಇಲ್ಲದ ಎಂಎಲ್ಎಗಳು ಹೇಳಿದ್ದನ್ನು ಕೇಳಿದ್ರೆ ಹೇಗೆ. ನಮ್ಮಲ್ಲಿ ಯಾವ ಗೊಂದಲಗಳು ಇಲ್ಲ. ಯಾವ ಬೇರೆ ರೀತಿಯ ಚರ್ಚೆಗಳು ಇಲ್ಲ. ಇರುವುದೆಲ್ಲ ಬರೀ ಮಾಧ್ಯಮಗಳಲ್ಲಿ. ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತನಾಡಿದ್ದೇನೆ. ಡಿ.ಕೆ.ಶಿವಕುಮಾರ್ ಜೊತೆಯಲ್ಲೂ ಮಾತನಾಡಿದ್ದೇನೆ. ಎಲ್ಲೂ ಯಾವತ್ತು ಯಾರ ಅಪಸ್ವರಗಳು ಇಲ್ಲ, ಯಾವ ಸಮಸ್ಯೆಗಳು ಇಲ್ಲ. ಏನೇ ತೀರ್ಮಾನಗಳಿದ್ದರೂ ಅದನ್ನ ಹೈಕಮಾಂಡ್ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ ಶಿವಕುಮಾರ್ ಬದ್ಧ ಎಂದು ಹೇಳಿದ್ದೇವೆ. ಸದ್ಯಕ್ಕೆ ನಾನೇನು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದರು.

ಇನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಬಜೆಟ್ ಮಂಡಿಸುತ್ತೇನೆ. ಅದಕ್ಕೆ ಎಲ್ಲಾ ತಯಾರಿಗಳು ನಡೆದಿದೆ. ಬಜೆಟ್‌ಗೂ ಮುನ್ನವೇ ಸರ್ಕಾರದ ಸಾಧನ ಸಮಾವೇಶವನ್ನು ಮಾಡುತ್ತೇವೆ. ಫೆಬ್ರವರಿ.13ರಂದು ಹಾವೇರಿಯಲ್ಲಿ ಸಮಾವೇಶ ಮಾಡಲು ತಯಾರಿ ನಡೆಯುತ್ತಿದೆ ಎಂದರು.

ಇನ್ನು ಕೇಂದ್ರ ಸಚಿವ ಎಚ್‌ಡಿ.ಕುಮಾರಸ್ವಾಮಿಗೆ ಹುಷಾರಿಲ್ಲ ಎಂದು ಕೇಳಿದೆ. ಈಗ ಅವರು ಹುಷಾರಿಗಿದ್ದಾರೆ. ಕುಮಾರಸ್ವಾಮಿ ಏನು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂದು ಹೇಳಿಲ್ಲ. ನೀವೇ ಮಾಧ್ಯಮದವರು ಹಾವಾ ಭಾವ ನೋಡಿ ಮಾತಿನ ಏರಿಳಿತ ನೋಡಿ ಹೇಳುತ್ತಿದ್ದೀರಾ‌. ಆ ರೀತಿಯಾಗಿ ಹಾವಾಭಾವದ ಮೇಲೆ ಎಲ್ಲಾ ನಿರ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಪಾಲಿಕೆ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಪಾಲಿಕೆ ಚುನಾವಣೆಗೆ ಸಿದ್ದರಾಗಿದ್ದೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ನಡೆಸಿದರೂ ನಮಗೆ ಸಮಸ್ಯೆ ಇಲ್ಲ. ಇರುವುದು ಎರಡೇ, ಒಂದು ಕಾಂಗ್ರೆಸ್ ಮತ ಮತ್ತೊಂದು ಕಾಂಗ್ರೆಸ್ ವಿರೋಧಿ ಮತ. ಇಲ್ಲಿ ಜೆಡಿಎಸ್ ಮತ ಬೇರೆ ಬಿಜೆಪಿ ಮತ ಬೇರೆ ಎಂದಿರುವುದಿಲ್ಲ. ಎರಡು ಪಕ್ಷದ ಒಂದೇ ಅಭ್ಯರ್ಥಿಗೆ ಬಿದ್ದರೆ ಕಾಂಗ್ರೆಸ್ ಸಮಸ್ಯೆಯಾಗುತ್ತದೆ ಎಂಬುದು ತಪ್ಪು ಅಭಿಪ್ರಾಯ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

5 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

5 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

6 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

6 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

6 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

6 hours ago