ಮೈಸೂರು ನಗರ

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ: ಸಿದ್ದರಾಮಯ್ಯ ಅವರೇ ಸಿಎಂ ಎಂದ ಸಚಿವ ಎಚ್‌ಸಿಎಂ

ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್‌ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಅವರಿಗೆ ಜೈ ಎಂದು ಜೈಕಾರ ಹಾಕಿದರು. ಈ ವೇಳೆ ಮುಗುಳ್ನಗುತ್ತಾ ಮಾತನಾಡಿದ ಸಚಿವರು, ಇದೆಲ್ಲ ಅಭಿಮಾನಿಗಳ ಆಸೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.

ಈ ವೇಳೆಯೂ ಸುಮ್ಮನಿರದ ಅಭಿಮಾನಿಗಳು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಎಂದು ಜೈಕಾರ ಹಾಕಿದರು. ಈ ವೇಳೆ ಮಾತನಾಡಿದ ಎಚ್‌ಸಿಎಂ, ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಸಿದ್ದರಾಮಯ್ಯ ಅವ್ರೇ ಸಿಎಂ. ಹೈಕಮಾಂಡ್ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಮುಂದೆ ಏನು ಆಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಜವಾಬ್ದಾರಿ ಕೊಡೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

16 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

45 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

1 hour ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago