ಮೈಸೂರು ನಗರ

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ: ಸಿದ್ದರಾಮಯ್ಯ ಅವರೇ ಸಿಎಂ ಎಂದ ಸಚಿವ ಎಚ್‌ಸಿಎಂ

ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್‌ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಅವರಿಗೆ ಜೈ ಎಂದು ಜೈಕಾರ ಹಾಕಿದರು. ಈ ವೇಳೆ ಮುಗುಳ್ನಗುತ್ತಾ ಮಾತನಾಡಿದ ಸಚಿವರು, ಇದೆಲ್ಲ ಅಭಿಮಾನಿಗಳ ಆಸೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.

ಈ ವೇಳೆಯೂ ಸುಮ್ಮನಿರದ ಅಭಿಮಾನಿಗಳು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಎಂದು ಜೈಕಾರ ಹಾಕಿದರು. ಈ ವೇಳೆ ಮಾತನಾಡಿದ ಎಚ್‌ಸಿಎಂ, ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಸಿದ್ದರಾಮಯ್ಯ ಅವ್ರೇ ಸಿಎಂ. ಹೈಕಮಾಂಡ್ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಮುಂದೆ ಏನು ಆಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಜವಾಬ್ದಾರಿ ಕೊಡೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

1 hour ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

1 hour ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

1 hour ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

1 hour ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 hours ago