ಮೈಸೂರು ನಗರ

ನನಗೂ ದೇವರಾಜ ಅರಸು ಅವರಿಗೂ ಹೋಲಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ಅರಸು ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇದ್ದರು. ಸನ್ನಿವೇಶ ಬಂತು ಅದ್ದರಿಂದ ಇಲ್ಲಿಯವರೆಗೂ ಮುಂದುವರೆದಿದ್ದೇನೆ. ಅರಸು ಅವರ ಕಾಲ ಬೇರೆ ಈಗ ಕಾಲ ಬೇರೆ. ಆಗ ಮುಖ್ಯಮಂತ್ರಿಯಾಗಿದ್ದಾಗ ಜನರೇ ದುಡ್ಡು ಕೊಟ್ಟು ಚುನಾವಣೆ ಮಾಡುತ್ತಿದ್ದರು. ದಾಖಲೆಗಳು ಇರುವುದೇ ಮುರಿಯುವುದಕ್ಕೆ. ಕ್ರಿಕೆಟ್ ನಲ್ಲಿ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿಯಲಿಲ್ವ ಮುಂದೆ ನನಗಿಂತ ಹೆಚ್ಚು ಬಜೆಟ್ ಮಂಡನೆ ಮಾಡುವುವವರು ಬರಬಹುದು ಎಂದರು.

ಇನ್ನು ಸಾವಿರ ದಿನದ ಸಾಧನ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ಕೃಷ್ಣೇಬೈರೇಗೌಡ ಒಂದು ಸಮಾವೇಶ ಮಾಡುತ್ತಿನಿ ಅಂತ ಹೇಳಿದ್ದಾರೆ. ಸಂಪುಟ ಪುನರ್‌ ರಚನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಅವರು ಯಾವಗ ಬಾ ಎಂದು ಹೇಳುತ್ತಾರೆ ಅವಾಗ ಭೇಟಿಗೆ ತೆರಳುತ್ತೇನೆ ಎಂದು ಹೇಳಿದರು.

ಇನ್ನು ಬಳ್ಳಾರಿ ಗಲಾಟೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಶೇಖರ್ ಮೃತದೇಹ ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿರುವ ಸಂಗತಿ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ವಿಚಾರ‌ ನನಗೆ ಗೊತ್ತಿಲ್ಲ. ಅದನ್ನ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ ಎಂದರು. ಇನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎನ್ನುವ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತಿದೆ. ಪೊಲೀಸರ ತನಿಖೆಯಿಂದ ಏನು ವರದಿ ಬರುತ್ತಾದೆ ನೋಡೋಣ. ವರದಿ ಬಂದ ಮೇಲೆ ಏನು ಮಾಡಬೇಕು ನೋಡೋಣ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

5 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

5 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

5 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

5 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

6 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

6 hours ago