ಮೈಸೂರು ನಗರ

ನನಗೂ ದೇವರಾಜ ಅರಸು ಅವರಿಗೂ ಹೋಲಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ಅರಸು ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇದ್ದರು. ಸನ್ನಿವೇಶ ಬಂತು ಅದ್ದರಿಂದ ಇಲ್ಲಿಯವರೆಗೂ ಮುಂದುವರೆದಿದ್ದೇನೆ. ಅರಸು ಅವರ ಕಾಲ ಬೇರೆ ಈಗ ಕಾಲ ಬೇರೆ. ಆಗ ಮುಖ್ಯಮಂತ್ರಿಯಾಗಿದ್ದಾಗ ಜನರೇ ದುಡ್ಡು ಕೊಟ್ಟು ಚುನಾವಣೆ ಮಾಡುತ್ತಿದ್ದರು. ದಾಖಲೆಗಳು ಇರುವುದೇ ಮುರಿಯುವುದಕ್ಕೆ. ಕ್ರಿಕೆಟ್ ನಲ್ಲಿ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿಯಲಿಲ್ವ ಮುಂದೆ ನನಗಿಂತ ಹೆಚ್ಚು ಬಜೆಟ್ ಮಂಡನೆ ಮಾಡುವುವವರು ಬರಬಹುದು ಎಂದರು.

ಇನ್ನು ಸಾವಿರ ದಿನದ ಸಾಧನ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ಕೃಷ್ಣೇಬೈರೇಗೌಡ ಒಂದು ಸಮಾವೇಶ ಮಾಡುತ್ತಿನಿ ಅಂತ ಹೇಳಿದ್ದಾರೆ. ಸಂಪುಟ ಪುನರ್‌ ರಚನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಅವರು ಯಾವಗ ಬಾ ಎಂದು ಹೇಳುತ್ತಾರೆ ಅವಾಗ ಭೇಟಿಗೆ ತೆರಳುತ್ತೇನೆ ಎಂದು ಹೇಳಿದರು.

ಇನ್ನು ಬಳ್ಳಾರಿ ಗಲಾಟೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಶೇಖರ್ ಮೃತದೇಹ ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿರುವ ಸಂಗತಿ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ವಿಚಾರ‌ ನನಗೆ ಗೊತ್ತಿಲ್ಲ. ಅದನ್ನ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ ಎಂದರು. ಇನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎನ್ನುವ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತಿದೆ. ಪೊಲೀಸರ ತನಿಖೆಯಿಂದ ಏನು ವರದಿ ಬರುತ್ತಾದೆ ನೋಡೋಣ. ವರದಿ ಬಂದ ಮೇಲೆ ಏನು ಮಾಡಬೇಕು ನೋಡೋಣ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

54 mins ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

15 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

15 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

15 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

15 hours ago