ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.
ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ಅರಸು ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇದ್ದರು. ಸನ್ನಿವೇಶ ಬಂತು ಅದ್ದರಿಂದ ಇಲ್ಲಿಯವರೆಗೂ ಮುಂದುವರೆದಿದ್ದೇನೆ. ಅರಸು ಅವರ ಕಾಲ ಬೇರೆ ಈಗ ಕಾಲ ಬೇರೆ. ಆಗ ಮುಖ್ಯಮಂತ್ರಿಯಾಗಿದ್ದಾಗ ಜನರೇ ದುಡ್ಡು ಕೊಟ್ಟು ಚುನಾವಣೆ ಮಾಡುತ್ತಿದ್ದರು. ದಾಖಲೆಗಳು ಇರುವುದೇ ಮುರಿಯುವುದಕ್ಕೆ. ಕ್ರಿಕೆಟ್ ನಲ್ಲಿ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿಯಲಿಲ್ವ ಮುಂದೆ ನನಗಿಂತ ಹೆಚ್ಚು ಬಜೆಟ್ ಮಂಡನೆ ಮಾಡುವುವವರು ಬರಬಹುದು ಎಂದರು.
ಇನ್ನು ಸಾವಿರ ದಿನದ ಸಾಧನ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ಕೃಷ್ಣೇಬೈರೇಗೌಡ ಒಂದು ಸಮಾವೇಶ ಮಾಡುತ್ತಿನಿ ಅಂತ ಹೇಳಿದ್ದಾರೆ. ಸಂಪುಟ ಪುನರ್ ರಚನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಅವರು ಯಾವಗ ಬಾ ಎಂದು ಹೇಳುತ್ತಾರೆ ಅವಾಗ ಭೇಟಿಗೆ ತೆರಳುತ್ತೇನೆ ಎಂದು ಹೇಳಿದರು.
ಇನ್ನು ಬಳ್ಳಾರಿ ಗಲಾಟೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಶೇಖರ್ ಮೃತದೇಹ ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿರುವ ಸಂಗತಿ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ವಿಚಾರ ನನಗೆ ಗೊತ್ತಿಲ್ಲ. ಅದನ್ನ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ ಎಂದರು. ಇನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎನ್ನುವ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತಿದೆ. ಪೊಲೀಸರ ತನಿಖೆಯಿಂದ ಏನು ವರದಿ ಬರುತ್ತಾದೆ ನೋಡೋಣ. ವರದಿ ಬಂದ ಮೇಲೆ ಏನು ಮಾಡಬೇಕು ನೋಡೋಣ ಎಂದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…