ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ ಮಾಡುತ್ತಿದ್ದೇವೆ. ನಿನ್ನೆಯಿಂದಷ್ಟೇ ಸಮೀಕ್ಷೆ ಆರಂಭವಾಗಿದೆ. ಎಲ್ಲಿಯೂ ಏನು ಸಮಸ್ಯೆ ಉಂಟಾಗಿಲ್ಲ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಯು ಚೆನ್ನಾಗಿ ನಡೆಯುತ್ತಿದೆ.
ಬಿಜೆಪಿಯವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿ ಗಣತಿ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದು ಹೇಳಿದರು.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ಇನ್ನು ಜಿಎಸ್ಟಿ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಈಗ ಎಲ್ಲರಿಗೂ ಜಿಎಸ್ಟಿ ಲಡ್ಡು ತಿನ್ನಿಸುತ್ತಿದೆ. ಜಿಎಸ್ಟಿ ಹೊಸ ನೀತಿಯಿಂದ ದೊಡ್ಡ ಬದಲಾವಣೆ ಆಗುತ್ತಿಲ್ಲ. GST ಹೊರೆ ಕಮ್ಮಿ ವಿಚಾರವನ್ನು ನೋಡುವುದಾದ್ರೆ ರಾಜ್ಯದ ಮಟ್ಟಿಗೆ ತಲಾ 57 ರೂ ಅಷ್ಟೇ. ಆದರೆ ಸಿದ್ದರಾಮಯ್ಯನವರು ಪ್ರತಿ ತಿಂಗಳು 2 ಸಾವಿರ ಕೊಡುತ್ತಿದ್ದಾರೆ. 200 ಯುನಿಟ್ ವಿದ್ಯುತ್ ನೀಡಿ ಮನೆ ಬೆಳಗುತ್ತಿದ್ದಾರೆ.
GST ಪಾಲು ರಾಜ್ಯಕ್ಕೆಷ್ಟು ಕಡಿಮೆ ಸಿಗುತ್ತಿದೆ ಎಂಬುದನ್ನು ಚಿಂತನೆ ಮಾಡಬೇಕು. ಇದರ ಬಗ್ಗೆ ನಮ್ಮ ಸಂಸದರು ಧ್ವನಿ ಎತ್ತದೆ ಇರುವುದು ಬೇಸರ ತಂದಿದೆ. GST ಲಡ್ಡು ಕೇವಲ ಬಿಜೆಪಿಗರಿಗಷ್ಟೇ ಸಿಹಿಯಾಗಿದೆ, ಆದರೆ ರಾಜ್ಯದ ಜನರಿಗೆ ಕಹಿಯಾಗಿದೆ ಎಂದು ಜಿಎಸ್ಟಿ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…