ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ ಮಾಡುತ್ತಿದ್ದೇವೆ. ನಿನ್ನೆಯಿಂದಷ್ಟೇ ಸಮೀಕ್ಷೆ ಆರಂಭವಾಗಿದೆ. ಎಲ್ಲಿಯೂ ಏನು ಸಮಸ್ಯೆ ಉಂಟಾಗಿಲ್ಲ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಯು ಚೆನ್ನಾಗಿ ನಡೆಯುತ್ತಿದೆ.
ಬಿಜೆಪಿಯವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿ ಗಣತಿ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದು ಹೇಳಿದರು.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ಇನ್ನು ಜಿಎಸ್ಟಿ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಈಗ ಎಲ್ಲರಿಗೂ ಜಿಎಸ್ಟಿ ಲಡ್ಡು ತಿನ್ನಿಸುತ್ತಿದೆ. ಜಿಎಸ್ಟಿ ಹೊಸ ನೀತಿಯಿಂದ ದೊಡ್ಡ ಬದಲಾವಣೆ ಆಗುತ್ತಿಲ್ಲ. GST ಹೊರೆ ಕಮ್ಮಿ ವಿಚಾರವನ್ನು ನೋಡುವುದಾದ್ರೆ ರಾಜ್ಯದ ಮಟ್ಟಿಗೆ ತಲಾ 57 ರೂ ಅಷ್ಟೇ. ಆದರೆ ಸಿದ್ದರಾಮಯ್ಯನವರು ಪ್ರತಿ ತಿಂಗಳು 2 ಸಾವಿರ ಕೊಡುತ್ತಿದ್ದಾರೆ. 200 ಯುನಿಟ್ ವಿದ್ಯುತ್ ನೀಡಿ ಮನೆ ಬೆಳಗುತ್ತಿದ್ದಾರೆ.
GST ಪಾಲು ರಾಜ್ಯಕ್ಕೆಷ್ಟು ಕಡಿಮೆ ಸಿಗುತ್ತಿದೆ ಎಂಬುದನ್ನು ಚಿಂತನೆ ಮಾಡಬೇಕು. ಇದರ ಬಗ್ಗೆ ನಮ್ಮ ಸಂಸದರು ಧ್ವನಿ ಎತ್ತದೆ ಇರುವುದು ಬೇಸರ ತಂದಿದೆ. GST ಲಡ್ಡು ಕೇವಲ ಬಿಜೆಪಿಗರಿಗಷ್ಟೇ ಸಿಹಿಯಾಗಿದೆ, ಆದರೆ ರಾಜ್ಯದ ಜನರಿಗೆ ಕಹಿಯಾಗಿದೆ ಎಂದು ಜಿಎಸ್ಟಿ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…