ಮೈಸೂರು: ಸಿಎಂ ಪತ್ನಿ ಪಡೆದಿರುವ ಸೈಟ್ ವಿಚಾರದಲ್ಲಿ ಯಾವುದೇ ರೀತಿಯ ಆಕ್ರಮ ಆಗಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲು ಆರಂಭಿಸಿದ್ದಾರೆ. ಚಾಮುಂಡೇಶ್ವರಿ ಸಹಕಾರ ಸಂಘದ ಹೆಸರಿನಲ್ಲಿ ನಿವೇಶನ ನೀಡಲು ಬಿಜೆಪಿ ಸರ್ಕಾರದ ಅವಧಿಯಲ್ಲೇ ತೀರ್ಮಾನ ಆಗಿತ್ತು. ಈ ಹಗರಣವನ್ನೆಲ್ಲಾ ನಮ್ಮ ಸರ್ಕಾರ ಬಯಲು ಮಾಡುತ್ತದೆ ಎಂಬ ಭಯದಿಂದ ಸಿಎಂ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಅವ್ಯವಹಾರದ ಬಗ್ಗೆ ನಾನು ಸಿಎಂ ಗಮನಕ್ಕೂ ತಂದಿದ್ದೇನೆ. ಈಗ ಸಿಎಂ ನಿರ್ದೇಶನದಂತೆ 48 ನಿವೇಶನಗಳ ಮಂಜೂರಾತಿ ರದ್ದಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡೇಶ್ವರಿ ಸಹಕಾರ ಸಂಘದ ಹೆಸರಿನಲ್ಲಿ ಬೇನಾಮಿ ಆಸ್ತಿಯನ್ನು ಜನರಿಗೆ ಕೊಡಲಾಗಿದೆ. ಹಗರಣದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹಳಷ್ಟು ಅಕ್ರಮ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…