ಮೈಸೂರು: ಸಿಎಂ ಪತ್ನಿ ಪಡೆದಿರುವ ಸೈಟ್ ವಿಚಾರದಲ್ಲಿ ಯಾವುದೇ ರೀತಿಯ ಆಕ್ರಮ ಆಗಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲು ಆರಂಭಿಸಿದ್ದಾರೆ. ಚಾಮುಂಡೇಶ್ವರಿ ಸಹಕಾರ ಸಂಘದ ಹೆಸರಿನಲ್ಲಿ ನಿವೇಶನ ನೀಡಲು ಬಿಜೆಪಿ ಸರ್ಕಾರದ ಅವಧಿಯಲ್ಲೇ ತೀರ್ಮಾನ ಆಗಿತ್ತು. ಈ ಹಗರಣವನ್ನೆಲ್ಲಾ ನಮ್ಮ ಸರ್ಕಾರ ಬಯಲು ಮಾಡುತ್ತದೆ ಎಂಬ ಭಯದಿಂದ ಸಿಎಂ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಅವ್ಯವಹಾರದ ಬಗ್ಗೆ ನಾನು ಸಿಎಂ ಗಮನಕ್ಕೂ ತಂದಿದ್ದೇನೆ. ಈಗ ಸಿಎಂ ನಿರ್ದೇಶನದಂತೆ 48 ನಿವೇಶನಗಳ ಮಂಜೂರಾತಿ ರದ್ದಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡೇಶ್ವರಿ ಸಹಕಾರ ಸಂಘದ ಹೆಸರಿನಲ್ಲಿ ಬೇನಾಮಿ ಆಸ್ತಿಯನ್ನು ಜನರಿಗೆ ಕೊಡಲಾಗಿದೆ. ಹಗರಣದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹಳಷ್ಟು ಅಕ್ರಮ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…