ಮೈಸೂರು ನಗರ

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಬಳಿ ಜಿ.ಟಿ.ದೇವೇಗೌಡರು ನಂಬಿಕೆ ಉಳಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ. ಜಿ.ಟಿ.ದೇವೇಗೌಡರಿಂದ ನಮ್ಮ ಪಕ್ಷಕ್ಕೆ ಬಹಳ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಇದೀಗ ಅವರ ತೀರ್ಮಾನದಿಂದ ಕಾರ್ಯಕರ್ತರಿಗೆ ಆಘಾತವಾಗಿದೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷಕ್ಕಿಂತ ನಮಗೆ ಯಾರೂ ದೊಡ್ಡವರಲ್ಲ. ಜಿ.ಟಿ.ದೇವೇಗೌಡರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿತ್ತು. ಆದರೆ ಮೋಸ ಮಾಡಿದರು. ಹಾಗಾಗಿ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ. ನಾಳೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮಾವೇಶವಿದೆ. ಆ ಕಾರಣ ದೇವೇಗೌಡರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಎಲ್ಲಾ ತಂತ್ರಗಳು ನಮಗೆ ಅರ್ಥವಾಗುತ್ತದೆ ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

3 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

11 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

17 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

1 hour ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

1 hour ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

2 hours ago