ಮೈಸೂರು ನಗರ

ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನಕ್ಕೆ ಬಳಸಲು ತೀರ್ಮಾನ ಮಾಡುತ್ತಿದ್ದೇವೆ. ಈಗ ಮತ್ತೆ ಆ ಆದೇಶವನ್ನು ಮರು ಪರಿಶೀಲನೆ ಮಾಡಿದ್ದೇವೆ. ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆ ಮುಖ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆ ಇಲ್ಲ. ಕೆಲವರು ಈ ಇಂತಹ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ. ಕಾರ್ಮಿಕರು ಆತಂಕ ಪಡುವುದು ಬೇಡ ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆ ಬೆಳವಣಿಗೆಗೆ ನಮ್ಮ ಸರ್ಕಾರ ಅತೀ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನೂ ಮಾಡುವದು ಹೇಳಿ. ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ. ಬಿಜೆಪಿ ಅವರು ರಾಜಕೀಯ ಗಾಗಿ ಗೊಂದಲ ಸೃಷ್ಟಿಸಿದ್ದಾರೆ. ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ತೀರ ಅನಿವಾರ್ಯ ಅನಿಸಿದರೆ ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಮನೋಜ್‌ ಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…

3 mins ago

ಜನಗಣತಿ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು…

18 mins ago

ಪರಿಸರ ಬಲಿಯಾಗದಂತೆ ಯೋಜನೆ ರೂಪುಗೊಳ್ಳಲಿ: ಸಂಜಯ್ ಗುಬ್ಬಿ

ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800…

30 mins ago

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

59 mins ago

ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು: ಚಾಮುಲ್ ನಿರ್ದೇಶಕ ಮಹದೇವಸ್ವಾಮಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…

1 hour ago

ಇರಾನ್-ಇಸ್ರೇಲ್‌ ಸಂಘರ್ಷ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಸಹಾಯವಾಣಿ ಆರಂಭ

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…

1 hour ago