ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನಕ್ಕೆ ಬಳಸಲು ತೀರ್ಮಾನ ಮಾಡುತ್ತಿದ್ದೇವೆ. ಈಗ ಮತ್ತೆ ಆ ಆದೇಶವನ್ನು ಮರು ಪರಿಶೀಲನೆ ಮಾಡಿದ್ದೇವೆ. ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆ ಮುಖ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆ ಇಲ್ಲ. ಕೆಲವರು ಈ ಇಂತಹ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ. ಕಾರ್ಮಿಕರು ಆತಂಕ ಪಡುವುದು ಬೇಡ ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆ ಬೆಳವಣಿಗೆಗೆ ನಮ್ಮ ಸರ್ಕಾರ ಅತೀ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನೂ ಮಾಡುವದು ಹೇಳಿ. ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ. ಬಿಜೆಪಿ ಅವರು ರಾಜಕೀಯ ಗಾಗಿ ಗೊಂದಲ ಸೃಷ್ಟಿಸಿದ್ದಾರೆ. ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ತೀರ ಅನಿವಾರ್ಯ ಅನಿಸಿದರೆ ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…