ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನಕ್ಕೆ ಬಳಸಲು ತೀರ್ಮಾನ ಮಾಡುತ್ತಿದ್ದೇವೆ. ಈಗ ಮತ್ತೆ ಆ ಆದೇಶವನ್ನು ಮರು ಪರಿಶೀಲನೆ ಮಾಡಿದ್ದೇವೆ. ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆ ಮುಖ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆ ಇಲ್ಲ. ಕೆಲವರು ಈ ಇಂತಹ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ. ಕಾರ್ಮಿಕರು ಆತಂಕ ಪಡುವುದು ಬೇಡ ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆ ಬೆಳವಣಿಗೆಗೆ ನಮ್ಮ ಸರ್ಕಾರ ಅತೀ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನೂ ಮಾಡುವದು ಹೇಳಿ. ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ. ಬಿಜೆಪಿ ಅವರು ರಾಜಕೀಯ ಗಾಗಿ ಗೊಂದಲ ಸೃಷ್ಟಿಸಿದ್ದಾರೆ. ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ತೀರ ಅನಿವಾರ್ಯ ಅನಿಸಿದರೆ ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…