ಮೈಸೂರು ನಗರ

ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ: ಮಾಜಿ ಸಚಿವ ಶ್ರೀರಾಮುಲು

ಮೈಸೂರು: ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಪಾರ್ಟಿ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ಹೈಕಮಾಂಡ್‌ ಈ ಬಗ್ಗೆ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕೂಡ ನಮ್ಮ ಪಕ್ಷದ ಸೀನಿಯರ್ ಲೀಡರ್. ಪಕ್ಷದ ನಾಯಕರ ಎಲ್ಲಾ ಭಿನ್ನಾಭಿಪ್ರಾಯಗಳನ್ನು ರಾಷ್ಟ್ರೀಯ ನಾಯಕರು ಸರಿ ಮಾಡುತ್ತಾರೆ ಎಂದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೆ ಎಷ್ಟು ಸ್ಥಾನಮಾನ ಸಿಗಬೇಕೋ ಅದು ಸಿಗುತ್ತದೆ. ತಾಯಿ ಚಾಮುಂಡೇಶ್ವರಿ ಶಕ್ತಿ ಆಶೀರ್ವಾದ ಮಾಡ್ತಾಳೆ. ಈ ಬಗ್ಗೆ ಏನು ಹೇಳಬೇಕು ಅದನ್ನು ಈಗಾಗಲೇ ಹೇಳಿದ್ದೀನಿ. ಮತ್ತೆ ಹಳೆಯ ವಿಚಾರದ ಬಗ್ಗೆ ಮತ್ತೆ ಮಾತನಾಡಲ್ಲ ಎಂದು ಹೇಳಿದರು.

ಇನ್ನು ದೆಹಲಿಯಲ್ಲಿ ಅಂಬೇಡ್ಕರ್ ಫೋಟೋಗೆ ಅವಮಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಮುಟ್ಟೋ ಶಕ್ತಿ ಯಾರಿಗಿದೆ? ಅಂತಹ ಗಂಡು ಇಲ್ಲಿ ಯಾರೂ ಹುಟ್ಟಿಲ್ಲ. ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ಇರುತ್ತಾರೆ. ಯಾರೋ ಮಾಡುವ ಆರೋಪಗಳು ಸತ್ಯವಲ್ಲ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿಎಎಸ್‌ಎಂಎಸಿ ವಿರುದ್ಧ ಪ್ರತಿಭಟನೆ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪೊಲೀಸ್‌ ವಶಕ್ಕೆ

ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಟಿಎಎಸ್‌ಎಂಸಿ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು…

8 mins ago

ನಟ ಪುನೀತ್‌ 50ನೇ ಹುಟ್ಟು ಹಬ್ಬ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ಇಂದು ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ…

25 mins ago

ಮಳೆಯ ನೆನಪು. . . ಮನದ ಕಡಲು

‘ಆಂದೋಲನ’ ಸಂದರ್ಶನದಲ್ಲಿ ಯೋಗರಾಜ್ ಭಟ್ ಮನದ ಮಾತು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕನ್ನಡ ಸಿನಿ ಪ್ರೇಕ್ಷಕರನ್ನು ‘ಮುಂಗಾರು ಮಳೆ’ಯಲ್ಲಿ…

1 hour ago

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್‌ ಕುಮಾರ್‌ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ…

1 hour ago

ಲೋಡ್‌ ಶೆಡ್ಡಿಂಗ್‌ ಬರೆಗೆ ಹೈರಾಣಾದ ಜನ..!

ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ…

2 hours ago

ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿವೈವಿ ಆರೋಪ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ…

2 hours ago