ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ 52 ವಾರಗಳ ಕಾಲ ಜಾನುವಾರುಗಳಿಗೆ ಬೇಕಾದ ಮೇವಿನ ದಾಸ್ತಾನು ಇದೆ. ಜೊತೆಗೆ ಹಸಿರು ಮೇವು ಬೆಳೆಯಲು ಇಲ್ಲಿಯವರೆಗೆ ಸುಮಾರು 13 ಸಾವಿರ ಮೇವಿನ ಬೀಜದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ 7 ಸಾವಿರ ಕಿಟ್ಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಹೇಗೆ ನೋಡಿಕೊಳ್ಳಬೇಕು ಎಂದು ರೈತ ಬಂಧುಗಳಿಗೆ ನಮ್ಮ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಬಿಸಿಲಿಗೆ ಹೆಚ್ಚಾಗಿ ಬಿಡದೇ ಮುಂಜಾನೆ ಮತ್ತು ಸಂಜೆ ವೇಳೆ ಹೊರಗಡೆ ಬಿಡಬೇಕು.
ಅವುಗಳಿಗೆ ಶುದ್ಧವಾದ ತಣ್ಣನೆಯ ನೀರನ್ನೇ ಕೊಡಬೇಕು. ಹಸಿರು ಮೇವನ್ನು ಹೆಚ್ಚು ಹೆಚ್ಚು ಕೊಡಬೇಕು ಎಂದು ಸಲಹೆ ನೀಡಿದರು.
ಇನ್ನು ರಾಸುಗಳಿಗೆ ಬರುವ ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಈಗಾಗಲೇ 6 ಬಾರಿ ಲಸಿಕಾ ಅಭಿಯಾನ ಮುಗಿಸಿದ್ದೇವೆ. ಮತ್ತೆ 7ನೇ ಲಸಿಕಾ ಕಾರ್ಯಕ್ರಮವನ್ನು ಮುಂದಿನ ಏಪ್ರಿಲ್ ತಿಂಗಳಿನಿಂದ ಆರಂಭಿಸುತ್ತೇವೆ. ಈಗ ಎಲ್ಲೂ ಕೂಡ ಕಾಲು ಬಾಯಿ ಜ್ವರದಂತಹ ಪ್ರಕರಣಗಳು ಕಂಡು ಬರುತ್ತಿಲ್ಲ. ಲಸಿಕೆ ಹಾಕುವುದರಿಂದ ಸಾಕಷ್ಟು ಕಡಿಮೆ ಆಗಿದೆ. ಈಗಾಗಲೇ ಔಷಧಿ ದಾಸ್ತಾನು ಕೂಡ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…