ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ 52 ವಾರಗಳ ಕಾಲ ಜಾನುವಾರುಗಳಿಗೆ ಬೇಕಾದ ಮೇವಿನ ದಾಸ್ತಾನು ಇದೆ. ಜೊತೆಗೆ ಹಸಿರು ಮೇವು ಬೆಳೆಯಲು ಇಲ್ಲಿಯವರೆಗೆ ಸುಮಾರು 13 ಸಾವಿರ ಮೇವಿನ ಬೀಜದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ 7 ಸಾವಿರ ಕಿಟ್ಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಹೇಗೆ ನೋಡಿಕೊಳ್ಳಬೇಕು ಎಂದು ರೈತ ಬಂಧುಗಳಿಗೆ ನಮ್ಮ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಬಿಸಿಲಿಗೆ ಹೆಚ್ಚಾಗಿ ಬಿಡದೇ ಮುಂಜಾನೆ ಮತ್ತು ಸಂಜೆ ವೇಳೆ ಹೊರಗಡೆ ಬಿಡಬೇಕು.
ಅವುಗಳಿಗೆ ಶುದ್ಧವಾದ ತಣ್ಣನೆಯ ನೀರನ್ನೇ ಕೊಡಬೇಕು. ಹಸಿರು ಮೇವನ್ನು ಹೆಚ್ಚು ಹೆಚ್ಚು ಕೊಡಬೇಕು ಎಂದು ಸಲಹೆ ನೀಡಿದರು.
ಇನ್ನು ರಾಸುಗಳಿಗೆ ಬರುವ ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಈಗಾಗಲೇ 6 ಬಾರಿ ಲಸಿಕಾ ಅಭಿಯಾನ ಮುಗಿಸಿದ್ದೇವೆ. ಮತ್ತೆ 7ನೇ ಲಸಿಕಾ ಕಾರ್ಯಕ್ರಮವನ್ನು ಮುಂದಿನ ಏಪ್ರಿಲ್ ತಿಂಗಳಿನಿಂದ ಆರಂಭಿಸುತ್ತೇವೆ. ಈಗ ಎಲ್ಲೂ ಕೂಡ ಕಾಲು ಬಾಯಿ ಜ್ವರದಂತಹ ಪ್ರಕರಣಗಳು ಕಂಡು ಬರುತ್ತಿಲ್ಲ. ಲಸಿಕೆ ಹಾಕುವುದರಿಂದ ಸಾಕಷ್ಟು ಕಡಿಮೆ ಆಗಿದೆ. ಈಗಾಗಲೇ ಔಷಧಿ ದಾಸ್ತಾನು ಕೂಡ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…