ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ 52 ವಾರಗಳ ಕಾಲ ಜಾನುವಾರುಗಳಿಗೆ ಬೇಕಾದ ಮೇವಿನ ದಾಸ್ತಾನು ಇದೆ. ಜೊತೆಗೆ ಹಸಿರು ಮೇವು ಬೆಳೆಯಲು ಇಲ್ಲಿಯವರೆಗೆ ಸುಮಾರು 13 ಸಾವಿರ ಮೇವಿನ ಬೀಜದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ 7 ಸಾವಿರ ಕಿಟ್ಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಹೇಗೆ ನೋಡಿಕೊಳ್ಳಬೇಕು ಎಂದು ರೈತ ಬಂಧುಗಳಿಗೆ ನಮ್ಮ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಬಿಸಿಲಿಗೆ ಹೆಚ್ಚಾಗಿ ಬಿಡದೇ ಮುಂಜಾನೆ ಮತ್ತು ಸಂಜೆ ವೇಳೆ ಹೊರಗಡೆ ಬಿಡಬೇಕು.
ಅವುಗಳಿಗೆ ಶುದ್ಧವಾದ ತಣ್ಣನೆಯ ನೀರನ್ನೇ ಕೊಡಬೇಕು. ಹಸಿರು ಮೇವನ್ನು ಹೆಚ್ಚು ಹೆಚ್ಚು ಕೊಡಬೇಕು ಎಂದು ಸಲಹೆ ನೀಡಿದರು.
ಇನ್ನು ರಾಸುಗಳಿಗೆ ಬರುವ ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಈಗಾಗಲೇ 6 ಬಾರಿ ಲಸಿಕಾ ಅಭಿಯಾನ ಮುಗಿಸಿದ್ದೇವೆ. ಮತ್ತೆ 7ನೇ ಲಸಿಕಾ ಕಾರ್ಯಕ್ರಮವನ್ನು ಮುಂದಿನ ಏಪ್ರಿಲ್ ತಿಂಗಳಿನಿಂದ ಆರಂಭಿಸುತ್ತೇವೆ. ಈಗ ಎಲ್ಲೂ ಕೂಡ ಕಾಲು ಬಾಯಿ ಜ್ವರದಂತಹ ಪ್ರಕರಣಗಳು ಕಂಡು ಬರುತ್ತಿಲ್ಲ. ಲಸಿಕೆ ಹಾಕುವುದರಿಂದ ಸಾಕಷ್ಟು ಕಡಿಮೆ ಆಗಿದೆ. ಈಗಾಗಲೇ ಔಷಧಿ ದಾಸ್ತಾನು ಕೂಡ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…