ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ 52 ವಾರಗಳ ಕಾಲ ಜಾನುವಾರುಗಳಿಗೆ ಬೇಕಾದ ಮೇವಿನ ದಾಸ್ತಾನು ಇದೆ. ಜೊತೆಗೆ ಹಸಿರು ಮೇವು ಬೆಳೆಯಲು ಇಲ್ಲಿಯವರೆಗೆ ಸುಮಾರು 13 ಸಾವಿರ ಮೇವಿನ ಬೀಜದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ 7 ಸಾವಿರ ಕಿಟ್ಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಹೇಗೆ ನೋಡಿಕೊಳ್ಳಬೇಕು ಎಂದು ರೈತ ಬಂಧುಗಳಿಗೆ ನಮ್ಮ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಬಿಸಿಲಿಗೆ ಹೆಚ್ಚಾಗಿ ಬಿಡದೇ ಮುಂಜಾನೆ ಮತ್ತು ಸಂಜೆ ವೇಳೆ ಹೊರಗಡೆ ಬಿಡಬೇಕು.
ಅವುಗಳಿಗೆ ಶುದ್ಧವಾದ ತಣ್ಣನೆಯ ನೀರನ್ನೇ ಕೊಡಬೇಕು. ಹಸಿರು ಮೇವನ್ನು ಹೆಚ್ಚು ಹೆಚ್ಚು ಕೊಡಬೇಕು ಎಂದು ಸಲಹೆ ನೀಡಿದರು.
ಇನ್ನು ರಾಸುಗಳಿಗೆ ಬರುವ ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಈಗಾಗಲೇ 6 ಬಾರಿ ಲಸಿಕಾ ಅಭಿಯಾನ ಮುಗಿಸಿದ್ದೇವೆ. ಮತ್ತೆ 7ನೇ ಲಸಿಕಾ ಕಾರ್ಯಕ್ರಮವನ್ನು ಮುಂದಿನ ಏಪ್ರಿಲ್ ತಿಂಗಳಿನಿಂದ ಆರಂಭಿಸುತ್ತೇವೆ. ಈಗ ಎಲ್ಲೂ ಕೂಡ ಕಾಲು ಬಾಯಿ ಜ್ವರದಂತಹ ಪ್ರಕರಣಗಳು ಕಂಡು ಬರುತ್ತಿಲ್ಲ. ಲಸಿಕೆ ಹಾಕುವುದರಿಂದ ಸಾಕಷ್ಟು ಕಡಿಮೆ ಆಗಿದೆ. ಈಗಾಗಲೇ ಔಷಧಿ ದಾಸ್ತಾನು ಕೂಡ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…