ಮೈಸೂರು ನಗರ

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು ಪತ್ರಕ್ಕೆ ಸಹಿ ಹಾಕಿಲ್ಲ. ಆದರೆ ನಾನು ಸ್ಥಳದಲ್ಲಿ ಇದ್ದಿದ್ದರೆ ಸಹಿ ಹಾಕುತ್ತಿದ್ದೆ. ನನಗೆ ಅವಕಾಶ ಸಿಗದಿದ್ದರೂ, ಮೊದಲು ಗೆದ್ದ ಯಾರಿಗಾದರೂ ಅವಕಾಶ ಸಿಗಲಿ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಾಂಗ್ರೆಸ್‌ ಪಕ್ಷದ ಬಣ. ನನಗೆ ರಾಹುಲ್‌ ಗಾಂಧಿ ಭೇಟಿ ಮಾಡಲು ಆಗಲ್ಲ. ಸುರ್ಜೇವಾಲಾ ಭೇಟಿ ಮಾಡುವ ಅನಿವಾರ್ಯತೆ ಬಂದಿಲ್ಲ. ನಮಗೆ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರೇ ಸಾಕು. ಯಾವುದೇ ವಿಷಯ, ವಿಚಾರವಿದ್ದರೂ ಹೈಕಮಾಂಡ್‌ ಸ್ಪಷ್ಟಪಡಿಸಬೇಕು. ಜನರು ಗೊಂದಲದಲ್ಲಿದ್ದು, ಅಧಿಕಾರ ನಡೆಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

3 mins ago

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ…

22 mins ago

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

55 mins ago

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…

1 hour ago

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ…

2 hours ago

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

2 hours ago